ಮಂಗಳೂರು:- ತಂದೆ ಸೇದು ಬಿಸಾಡಿದ್ದ ಅರ್ಧ ಬೀಡಿ ನುಂಗಿ 10 ತಿಂಗಳ ಕಂದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಅಡ್ಯಾರ್ ನಲ್ಲಿ ಜರುಗಿದೆ
ಮಗುವೊಂದು ತಂದೆ ಸೇದಿ ಎಸೆದಿದ್ದ ಬೀಡಿಯನ್ನು ನುಂಗಿದ್ದು, ಅಸ್ವಸ್ಥಗೊಂಡಿದ್ದ ಮಗುವನ್ನು ಆ ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶನಿವಾರ ಮಧ್ಯಾಹ್ನ 1.25 ರ ವೇಳೆಗೆ ಈ ಘಟನೆ ನಡೆಸಿದ್ದು, ಭಾನುವಾರ ಬೆಳಗ್ಗೆ 10-25 ರ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದೆ ಎಂದು ತಿಳಿದು ಬಂದಿದೆ. ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಹತ್ತು ತಿಂಗಳ ಮಗು ಅನೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ತಂದೆಯ ಎಡವಟ್ಟು ಮಗುವಿನ ಪ್ರಾಣಕ್ಕೆ ಕುತ್ತು ತಂದಿದೆ.
ತನ್ನ ಗಂಡ ಬೀಡಿ ಸೇದಿ, ಮನೆಯಲ್ಲಿ ಅಲ್ಲಲ್ಲಿ ಬಿಸಾಾಡುತ್ತಿದ್ದರು. ಅದನ್ನು ತೆಗೆದು ಕಸದ ಬುಟ್ಟಿಗೆ ಹಾಕಿ ಎಂದು ಹೇಳಿದರೂ ನನ್ನ ಮಾತು ಕೇಳುತ್ತಿರಲಿಲ್ಲ. ಆದರೆ ಇದೀಗ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ನುಂಗಿ ಮಗುವು ಸಾವಿಗೀಡಾಗಿದೆ ಎಂದು ಪತ್ನಿ ಆರೋಪ ಮಾಡಿದ್ದಾರೆ.