ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ಧಾರಣ ಘಟನೆ ನಡೆದಿದ್ದು, ಆಟವಾಡ್ತಿದ್ದಾಗ ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ.
ತನಿಷ್ಕಾ(11) ಮೃತ ಬಾಲಕಿಯಾಗಿದ್ದು, ಶಾಲೆಗೆ ರಜೆ ಇದ್ದ ಕಾರಣ ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿ ಈ ದುರ್ಘಟನೆ ಸಂಭವಿಸಿದೆ. ವಿದ್ಯುತ್ ಶಾಕ್ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಇದರಿಂದ ಬೆಸ್ಕಾಂ ಅಧಿಕಾರಿಗಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಸ್ಪತ್ರೆ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.