ಕೊಡಗು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೇರಿ 11 ವರ್ಷಗಳು ತುಂಬಿದ ಹಿನ್ನಲೆ ದೇಶಾದ್ಯಂತ ‘ಸಂಕಲ್ಪದಿಂದ ಸಿದ್ಧಿ’ ಎಂಬ ಜನಸಂಪರ್ಕ ಅಭಿಯಾನವನ್ನು ಬಿಜೆಪಿ ಆರಂಭಿಸಿದ್ದು. ಅದರ ಭಾಗವಾಗಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕೊಡಗು ಬಿಜೆಪಿ ವತಿಯಿಂದ ಜಿಲ್ಲೆಯಾದ್ಯಂತ ಆಗಸ್ಟ್ 15ರವರೆಗೆ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಡಿಕೇರಿಯ ಬನ್ನಿ ಮಂಟಪದ ಬಳಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯ್ತು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾ ಕೇಂದ್ರ ಮಡಿಕೇರಿಯಿಂದ ಕಾರ್ಯಕ್ರಮ ಆರಂಭಿಸಲಾಗಿದೆ. ಮಡಿಕೇರಿ ನಗರ, ಮಂಡಲ ವತಿಯಿಂದ ದಿನಕ್ಕೊಬ್ಬ ಕಾರ್ಯಕರ್ತ ಗಿಡ ನೆಡುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದರು.
ಮಡಿಕೇರಿ ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕವನ್ ಕಾವೇರಪ್ಪ ಮಾತನಾಡಿ, ಕಳೆದ 11 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ಶೇ.85ರಷ್ಟು ಆಶ್ವಾಸನೆಯನ್ನು ಈಡೇರಿಸಿದ್ದಾರೆ. ಅದನ್ನು ಜನರಿಗೆ ಮುಟ್ಟಿಸುವ ಕೆಲಸವಾಗ್ತಿದೆ ಎಂದರು. ಮಡಿಕೇರಿ ಮಂಡಲದ 23 ವಾರ್ಡ್ಗಳಲ್ಲೂ ಪ್ರತಿನಿತ್ಯ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ರು.
ಈ ಸಂದರ್ಭ ಪಕ್ಷದ ಜಿಲ್ಲಾ ಖಜಾಂಚಿ ಕನ್ನಂಡ ಸಂಪತ್, ನಗರಸಭೆ ಸದಸ್ಯೆ ಸವಿತಾ ರಾಕೇಶ್, ನಗರ ಮಂಡಲ ಕಾರ್ಯದರ್ಶಿ ಬಿ.ಎಂ ಹರೀಶ್, ಪ್ರಮುಖರಾದ ಜೀವನ್, ಬೊಳ್ಳಜಿರ ಬಿ.ಅಯ್ಯಪ್ಪ, ರಾಕೇಶ್ ಅನ್ವೇಕರ್, ಬಸವರಾಜು, ರಾಜೇಶ್, ನವ್ಯ ರಾಜೇಶ್, ಗಜೇಂದ್ರ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು