ಬೀದರ್:- ಈಜುಕೊಳದಲ್ಲಿ ಸ್ವಿಮ್ಮಿಂಗ್ ವೇಳೆ ತಲೆಗೆ ಗಂಭೀರ ಪೆಟ್ಟಾಗಿ 19 ವರ್ಷದ ಯುವಕ ಪ್ರಾಣಬಿಟ್ಟ ಘಟನೆ ಬೀದರ್ನ ನರಸಿಂಹ ಝರಣಿ ದೇವಸ್ಥಾನದ ಹತ್ತಿರವಿರುವ ಖಾಸಗಿ ಈಜುಕೊಳದಲ್ಲಿ ನಡೆದಿದೆ.
ಕಡಿಮೆ ಸಮಯದಲ್ಲಿ ಮನೆಕೆಲಸಗಳನ್ನು ಮುಗಿಸಲು ಈ ಟಿಪ್ಸ್ ಫಾಲೋ ಮಾಡಿ ಸಾಕು..!
ಸೈಯದ್ ಅಫಾನ್ (19) ಮೃತ ಯುವಕ. ಸ್ನೇಹಿತರೊಂದಿಗೆ ಈಜುಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ತಲೆಯ ಹಿಂಭಾಗಕ್ಕೆ ಗಂಭೀರ ಪೆಟ್ಟಾಗಿ ಯುವಕ ಪೂಲ್ನಲ್ಲೇ ಮುಳುಗಿ ಮೃತಪಟ್ಟಿದ್ದಾನೆ. ಈಜು ಕೊಳದಲ್ಲಿ ಪಲ್ಟಿ ಹೊಡೆಯುವ ವೇಳೆ ತಲೆಗೆ ಗಂಭೀರ ಪೆಟ್ಟಾಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಬಳಿಕ ಈಜುಕೊಳ ಮಾಲೀಕರ ವಿರುದ್ಧ ಮೃತ ಯುವಕನ ಕುಟುಂಬಸ್ಥರು ನಿರ್ಲಕ್ಷ್ಯ ಆರೋಪ ಹೊರಿಸಿದ್ದಾರೆ. ನಿಷ್ಕಾಳಜಿ ವಹಿಸಿದ ಈಜುಕೊಳದ ಮಾಲೀಕರ ವಿರುದ್ಧ ಕಾನೂನು ಕ್ರಮಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಬೀದರ್ನ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.