ಬೆಂಗಳೂರು:- ನಗರದ ಪಾರ್ಕ್ ಒಂದರಲ್ಲಿ 19 ವರ್ಷದ ಯುವಕ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಸುಮಿತ್ ಬಿಕೋ ಅಲಿಯಾಸ್ ತುಷಾಂತ್ ಮೃತ ಯುವಕ.
ಕೆ.ಎನ್.ರಾಜಣ್ಣರ 75ನೇ ವರ್ಷದ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು: ಏನಾಯ್ತು?
ನಗರದ ಹೋಟೆಲ್ವೊಂದರಲ್ಲಿ ಕೆಲಸ ಮಾಡಿಕೊಂಡು ತುಷಾಂತ್ ಪೋಷಕರ ಜೊತೆ ವಾಸವಾಗಿದ್ದ. ತುಷಾಂತ್ ಶುಕ್ರವಾರ ಸಂಜೆ ಹೊತ್ತಿಗೆ ಮನೆಯಲ್ಲಿ ಕಿರಿಕ್ ಮಾಡಿಕೊಂಡು ಮನೆಯಿಂದ ಹೊರಹೋಗಿದ್ದ. ರಾತ್ರಿಯೆಲ್ಲಾ ಮಗ ಮನೆಗೆ ಬಾರದೆಯಿದ್ದ ಕಾರಣ ಪೋಷಕರು ಹುಡುಕಾಟ ನಡೆಸಿದ್ದರು. ಶನಿವಾರ ಬೆಳಗ್ಗೆ ಪಾರ್ಕ್ನಲ್ಲಿ ತುಷಾಂತ್ ನೇಣಿಗೆ ಶರಣಾಗಿರುವ ವಿಚಾರ ಪೋಷಕರಿಗೆ ತಿಳಿದಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಹೆಣ್ಣೂರು ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.