Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಉಗ್ರ ರಾಣಾನನ್ನು ಭಾರತಕ್ಕೆ ಎಳೆದು ತಂದ ಎನ್‌ ಐಎ: ದೆಹಲಯಲ್ಲಿ ಫುಲ್‌ ಹೈಅಲರ್ಟ್

    By Author AINApril 10, 2025
    Share
    Facebook Twitter LinkedIn Pinterest Email
    Demo

    ‌ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ 2008 ನವೆಂಬರ್‌ 26ರಂದು ಮುಂಬೈ ಸರಣಿ ಬಾಂಬ್‌ ದಾಳಿಯ ಸಂಚುಕೋರರಲ್ಲಿ ಒಬ್ಬನಾದ ತವಾವುರ್‌ ಹುಸೈನ್ ರಾಣಾನನ್ನು ಕೊನೆಗೂ ಭಾರತಕ್ಕೆ ಎಳೆದು ತರಲಾಗಿದೆ.
    ಅಮೇರಿಕದಿಂದ ಗಡಿಪಾರಾದ ಉಗ್ರ ರಾಣಾನನ್ನು ವಿಶೇಷ ವಿಮಾನದ ಮೂಲಕ ನವದೆಹಲಿಗೆ ತರಲಾಯಿತು.ರಾಣಾನನ್ನು ಕರೆ ತಂದ ವಿಶೇಷ ವಿಮಾನ ಮಧ್ಯಾಹ್ನ 2.50ಕ್ಕೆ ದೆಹಲಿಯ ಪಾಲಂ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್‌ ಆಯಿತು. ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಎನ್‌ಐಎ ಅಧಿಕಾರಿಗಳು ತವಾವುರ್‌ ರಾಣಾನನ್ನು ಬಂಧಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ. ಹೀಗಾಗಿ ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೈಅಲರ್ಟ್‌ ಮಾಡಲಾಗಿದೆ.
    ಪಾಕಿಸ್ತಾನ ಮೂಲದ 64 ವರ್ಷದ ರಾಣಾ, ಕೆನಡಾದಲ್ಲಿ ವಾಸವಾಗಿದ್ದ. ಈತನನ್ನು ಅಮೆರಿಕದ ಗುಪ್ತಚರ ಸಂಸ್ಥೆಗಳು ಬಂಧಿಸಿ ಜೈಲಿಗೆ ಅಟ್ಟಿದ್ವು. ಭಾರತಕ್ಕೆ ಗಡೀಪಾರು ತಪ್ಪಿಸಿಕೊಳ್ಳಲು ರಾಣಾ ಅಮೆರಿಕದ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಆದರೆ, ಆತನ ಅರ್ಜಿಯನ್ನು ಕೋರ್ಟ್‌ ವಜಾ ಮಾಡಿತ್ತು.
    ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಪಾಕಿಸ್ತಾನಿ ಅಮೆರಿಕನ್‌ ಪ್ರಜೆ ಡೇವಿಡ್‌ ಕೋಲ್ಮನ್‌ ಹೆಡ್ಲಿ ಅಲಿಯಾಸ್‌ ದಾವೂದ್‌ ಗಿಲಾನಿಯ ನಿಕಟ ಸಹಚರನಾಗಿದ್ದ ರಾಣಾ 2008ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ರಾಣಾನನ್ನು ದೆಹಲಿಯ ಎನ್‌ ಐಎ ಕೋರ್ಟ್‌ ಗೆ ಹಾಜರುಪಡಿಸಿ ತಮ್ಮ ವಶಕ್ಕೆ ಪಡೆಯಲಿರುವ ಎನ್‌ ಐಎ ಅಧಿಕಾರಿಗಳು, ರಾಣಾನ ವಿಚಾರಣೆ ಆರಂಭಿಸಲಿದ್ದಾರೆ. ಇದು ಮುಂಬೈ ದಾಳಿಯ ತನಿಖೆಗೆ ಮತ್ತಷ್ಟು ಸ್ಪಷ್ಟತೆ ಸಿಗಲಿದೆ.
    2008ರ ನವೆಮಬರ್‌ 26ರಂದು ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್‌ ರೈಲ್ವೆ ನಿಲ್ದಾಣ, ತಾಜ್‌ ಹೋಟೆಲ್‌ ಮೇಲೆ ದಾಳಿ ಮಾಡಿದ್ದ ಉಗ್ರರು, 166 ಜನರನ್ನು ಹತ್ಯೆ ಮಾಡಿದ್ದರು. ದಾಳಿ ವೇಳೆ ಸೆರೆ ಸಿಕ್ಕಿದ್ದ ಉಗ್ರ ಕಸಬ್‌ ನನ್ನು ಈಗಾಗಲೇ ಭಾರತ ಗಲ್ಲಿಗೇರಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ರಾಜ್ಯದ ಜನರಿಗೆ ಪ್ಲ್ಯಾನ್ ಅನುಮತಿ ಇಲ್ಲದೆ ಮನೆ ಕಟ್ಟಲು ಹೋಗಬಾರದು: ಡಿಸಿಎಂ ಡಿಕೆ ಶಿವಕುಮಾರ್

    June 25, 2025

    ಸುಭಾಂಶು ಶುಕ್ಲಾ 140 ಕೋಟಿ ಜನರ ಆಕಾಂಕ್ಷೆಗಳನ್ನು ಹೊತ್ತಿದ್ದರು: ಪ್ರಧಾನಿ ಮೋದಿ

    June 25, 2025

    ಬಡವರಿಂದ ಹಣ ಪಡೆಯುವ ದರಿದ್ರ ಜಮೀರ್’ಗಿಲ್ಲ: ಸಚಿವರ ಪರ ಶಾಸಕ ರವಿ ಗಣಿಗ ಬ್ಯಾಟಿಂಗ್

    June 25, 2025

    ಅಂತಾರಾಷ್ಟ್ರೀಯ ಯೋಗ ದಿನ: “ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ” ವಿಶ್ವವಿದ್ಯಾಲಯದಿಂದ ಯೋಗಾಭ್ಯಾಸ

    June 25, 2025

    ಗುಜರಾತ್’ಗೆ 21 ಬಾರಿ ಬಾಂಬ್ ಬೆದರಿಕೆ: ಜೈಲಿನಲ್ಲಿ ಮಹಿಳಾ ಇಂಜಿನಿಯರ್ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

    June 25, 2025

    ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

    June 25, 2025

    ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ

    June 25, 2025

    Israel Iran Ceasefire: ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಕಣ್ಮರೆಯಾಗುತ್ತವೆ ಎಂದು ಟ್ರಂಪ್ ಹೇಳಿದ್ಯಾಕೆ..?

    June 25, 2025

    ಯುನೈಟೆಡ್ ಎಲಿಸಿಯಂ ಅಪಾರ್ಟ್ಮೆಂಟ್’ನಲ್ಲಿ ಯಶಸ್ವಿಯಾಗಿ ನಡೆದ ಬೃಹತ್ “ಉಚಿತ ಆರೋಗ್ಯ ಶಿಬಿರ”

    June 25, 2025

    ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ..!

    June 25, 2025

    Shubhanshu Shukla: ಬಾಹ್ಯಾಕಾಶ ನೌಕೆಗೆ ಹೋಗುವ ಮುನ್ನ ತನ್ನ ನೆಚ್ಚಿನ ಹಾಡನ್ನು ಕೇಳಿದ ಸುಭಾಂಶು ಶುಕ್ಲಾ..!

    June 25, 2025

    ಜೂನ್ 27ರಿಂದ 29ರವರೆಗೆ ಫೋಟೋ ಟುಡೇ ವಸ್ತು ಪ್ರದರ್ಶನ

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.