Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರ: ಸಿಎಂ ನಡೆಗೆ ಪಂಚಮಸಾಲಿ ಪೀಠಾಧಿಪತಿ ಅಸಮಾಧಾನ

    By AIN AuthorDecember 11, 2023
    Share
    Facebook Twitter LinkedIn Pinterest Email
    Demo

    ಧಾರವಾಡ : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸಿಗದೇ ಹೋದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಯಲಿವೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

    ಕಳೆದ ಮೂರು ವರ್ಷಗಳಿಂದ ನಾವು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಕಳೆದ ಸರ್ಕಾರ ಕೊನೆ ಘಳಿಗೆಯಲ್ಲಿ ನಮಗೆ 2ಡಿ ಮೀಸಲಾತಿ ನೀಡಿತು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದು ಆದೇಶ ಪತ್ರ ನಮ್ಮ ಕೈ ಸೇರಲೇ ಇಲ್ಲ. ಈಗ ಹೊಸ ಸರ್ಕಾರ ಬಂದಿದೆ. ನಮ್ಮ ಸಮಾಜದ ಶಾಸಕರು, ಸಚಿವರು ಮೀಸಲಾತಿಗಾಗಿ ಮತ್ತೆ ಸಿಎಂ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ.

    ಆದರೆ, ಸಿದ್ದರಾಮಯ್ಯನವರು ಬಜೆಟ್ ಅಧಿವೇಶನ ಮುಗಿದ ಮೇಲೆ ನಮ್ಮ ಸಮಾಜದ ಮುಖಂಡರ ಸಭೆ ಕರೆಯುವುದಾಗಿ ಹೇಳಿ ಇಂದಿಗೂ ಸಭೆ ಕರೆದಿಲ್ಲ. ಇದರಿಂದಾಗಿ ಮತ್ತೆ ನಾವು ಹೋರಾಟ ಆರಂಭಿಸಿದ್ದೇವೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸರ್ಕಾರದ ಗಮನಸೆಳೆದಿದ್ದೇವೆ…ಬೆಳಗಾವಿಯಲ್ಲೇ ನಮ್ಮ ಸಮಾಜದ ಮುಖಂಡರ ಸಭೆ ಕರೆದು ಮೀಸಲಾತಿ ವಿಚಾರವಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಿಎಂ ಅವರ ಮೇಲೆ ಒತ್ತಡ ಹಾಕುತ್ತಿದ್ದೇವೆ.

    ಆದರೆ, ಸಿಎಂ ಅವರು ಮತ್ತೆ ಈಗ ಅಧಿವೇಶನ ಮುಗಿದ ಮೇಲೆ ಮಾತನಾಡೋಣ ಎನ್ನುತ್ತಿದ್ದಾರೆ. ಇಲ್ಲೇ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಿ ಎಂದು ಪರಿ ಪರಿಯಾಗಿ ಬೇಡಿಕೊಂಡರೂ ಅಧಿವೇಶನ ಮುಗಿದ ಮೇಲೆ ಬೆಂಗಳೂರಿನಲ್ಲೇ ಸಭೆ ಕರೆಯುತ್ತೇನೆ ಎಂದಿದ್ದಾರೆ. ಸಿಎಂ ಅವರ ಈ ನಕಾರಾತ್ಮಕ ಸ್ಪಂದನೆ ವಿರುದ್ಧ ನಾವು ಇದೇ ಡಿ.13 ರಂದು ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಸಿಎಂ ಅವರ ನಿರ್ಲಕ್ಷ್ಯ ಧೋರಣೆಯಿಂದಾಗಿ ಈ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

     

    Demo
    Share. Facebook Twitter LinkedIn Email WhatsApp

    Related Posts

    ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ: ಈ ಲೀಸ್ಟ್ ನೋಡಿದ್ರೆ ನಿಮ್ಮ ಎದೆಬಡಿತ ಜಾಸ್ತಿ ಆಗೋದ್ರಲ್ಲಿ ಡೌಟೇ ಇಲ್ಲ..!

    June 28, 2025

    ಸಿಎಂ ಸಿದ್ದರಾಮಯ್ಯ ಇಲ್ಲ ಅಂದ್ರೆ ನಾನು ರಾಜಕೀಯ ಬಿಡುತ್ತೇನೆ: ಸಚಿವ ಕೆಎನ್ ರಾಜಣ್ಣ

    June 28, 2025

    ಈ ಬಾರಿ ದಸರಾ ಸಿಎಂ ಸಿದ್ದರಾಮಯ್ಯ ಮಾಡಲ್ಲ: ಸ್ಫೋಟಕ ಹೇಳಿಕೆ ಕೊಟ್ಟ ಆರ್.ಅಶೋಕ್!

    June 28, 2025

    5 ಹುಲಿಗಳ ಸಾವು ಕೇಸ್: ಇವರೇ ನೋಡಿ ವಿಷಪ್ರಾಶನ ಮಾಡಿದ ಪಾಪಿಗಳು..!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ದಿನಸಿ ಅಂಗಡಿಗೆ ನುಗ್ಗಿ ಕಳ್ಳತನ ಮಾಡಿದ್ದಲ್ಲದೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ..!

    June 28, 2025

    ಚಾಮರಾಜನಗರ: ಅರಣ್ಯ ಸಿಬ್ಬಂದಿಗಳಿಗೆ ಉಚಿತ ಕಿಟ್ ವಿತರಣೆ ಕಾರ್ಯಕ್ರಮ!

    June 28, 2025

    ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಕೇಸ್: ಕೊನೆಗೂ ಸಿಕ್ಕಿಬಿದ್ದ ಆರೋಪಿಗಳು..!

    June 28, 2025

    ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ..! ಸಾವಿನ ಸಂಖ್ಯೆ 17ಕ್ಕೆ ಏರಿಕೆ

    June 28, 2025

    ಕಾರ್ಮಿಕರ ನೋವು ನಲಿವುಗಳಿಗೆ ಸದಾ ಸ್ಪಂದನೆ: ವೆಂಕಟೇಶ ಕಾಟವೆ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಭದ್ರಾ ನೀರು ಹರಿಸಲು ಅಡ್ಡಿ| ಇಂದು ದಾವಣಗೆರೆ ಬಂದ್: ಟಯರ್ ಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕರ ಆಕ್ರೋಶ

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.