ಅಪಘಾತದಲ್ಲಿ 4 ಗೋವುಗಳ ಸಾವು : ಕೊಯನಾಡಿನಲ್ಲಿ ಘಟನೆ
ಮಡಿಕೇರಿ: ರಸ್ತೆಯಲ್ಲಿ ಮಲಗಿದ್ದ ಜಾನುವಾರುಗಳಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಕರುಗಳು ಸೇರಿದಂತೆ ನಾಲ್ಕು ಹಸುಗಳು ಸಾವನ್ನಪ್ಪಿರುವ ಘಟನೆ ಸಂಪಾಜೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಕೊಯನಾಡಿನಲ್ಲಿ ನಡೆದಿದೆ. ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ! ಕೊಯನಾಡು ಶ್ರೀಗಣಪತಿ ದೇವಾಲಯದ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಧ್ಯರಾತ್ರಿ ವಾಹನ ಡಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ. ಜಾನುವಾರುಗಳನ್ನು ಸಾಕುವ ಮಾಲೀಕರು ಅವುಗಳ ಸುರಕ್ಷತೆಯ ಬಗ್ಗೆಯೂ ಹೆಚ್ಚಿನ ಕಾಳಜಿ ತೋರಬೇಕು ಮತ್ತು ಹೆದ್ದಾರಿಯಲ್ಲಿ ಮೇಯಲು ಬಿಡಬಾರದು ಎಂದು ಪ್ರಾಣಿ ಪ್ರಿಯರು ಮನವಿ ಮಾಡಿದ್ದಾರೆ
Copy and paste this URL into your WordPress site to embed
Copy and paste this code into your site to embed