Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾತ್ರಿ ಅಂಗಡಿ ಬಂದ್ ಮಾಡಿಸಲು ಬಂದ PSI ಮೇಲೆಯೇ ಕೈ ಮುಖಂಡನ ದರ್ಪ..! ವಿಡಿಯೋ

    By AIN AuthorNovember 21, 2023
    Share
    Facebook Twitter LinkedIn Pinterest Email
    Demo

    ದಾವಣಗೆರೆ: ದಾವಣಗೆರೆಯ ಕಾಂಗ್ರೆಸ್ ಮುಖಂಡ ಹಾಗೂ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಆಪ್ತ ಅಯುಬ್ ಪೈಲ್ವಾನ್ ಸೇರಿದಂತೆ ಆತನ ಕುಟುಂಬಸ್ಥರು ಪೊಲೀಸರ ಮೇಲೆಯೇ ದರ್ಪ ತೋರಿದ್ದಾರೆ. ನವೆಂಬರ್ 16 ರಾತ್ರಿ ನಗರದ ಅರಳಿಮರ ವೃತ್ತದಲ್ಲಿ ಈ ಘಟನೆ ನಡೆದಿದೆ. ರಾತ್ರಿ 11 ಗಂಟೆ ಬಳಿಕ ನಗರದಲ್ಲಿನ ಅಂಗಡಿ ಮುಂಗಟ್ಟುಗಳನ್ನ ಮುಚ್ಚುವಂತೆ ನಿಯಮವಿದೆ. ಆದರೆ, ರಾತ್ರಿ 11.30ರ ಸುಮಾರಿನಲ್ಲಿ ಅರಳಿ ವೃತ್ತದಲ್ಲಿ ಅಂಗಡಿಯ ಮುಂದೆ ಬೈಕ್ ನಿಲ್ಲಿಸಿಕೊಂಡು ಕೆಲವರು ಯುವಕರು ಕುಳಿತುಕೊಂಡಿದ್ದರು.

    ಈ ವೇಳೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಬೀಟ್ ಸಿಬ್ಬಂದಿ ಸ್ಥಳಕ್ಕೆ ಬಂದು ಅಂಗಡಿ ಬಂದ್ ಮಾಡಿ ಮನೆಗೆ ತೆರಳುವಂತೆ ಸೂಚನೆಯನ್ನ ನೀಡಿದ್ದಾರೆ. ಅಲ್ಲದೇ, ಬೈಕ್ ನ ಪೋಟೋ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಆಗ ಯುವಕನೊಬ್ಬ ಮನೆಗೆ ತೆರಳದೆ ಬಗ್ಗಿ ತನ್ನ ಹಿಂಭಾಗ ತೋರಿಸಿ ಈ ಪೋಟೋ ತೆಗೆದುಕೊಳ್ಳಿ ಎಂದು ಆವಾಜ್ ಹಾಕಿದ್ದಾನೆ. ಅಲ್ಲದೇ, ಸುಮ್ಮನೆ ಹೋಗದಿದ್ದರೆ ತನ್ನ ಸಂಬಂಧಿ ಕರೆಸಿ ಏನು ಮಾಡುತ್ತೇನೆ ಎಂದು ಹೆದರಿಸಿದ್ದಾನೆ. ಇದೇ ಅವಾಂತರಕ್ಕೆ ಕಾರಣವಾಗಿದೆ. ಬಳಿಕ, ಬೀಟ್ ಸಿಬ್ಬಂದಿ ಕೂಡಲೇ ಆಜಾದ್ ನಗರ ಠಾಣೆಯ ಪಿಎಸ್ ಐ ಇಮ್ರಾನ್ ಬೇಗ್ ಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಬಂದು ಅಂಗಡಿ ಮುಚ್ಚುವಂತೆ ಹೇಳಿದ್ದಾರೆ.

    https://ainlivenews.com/wp-content/uploads/2023/11/WhatsApp-Video-2023-11-21-at-15.02.11_7e4ffa2a.mp4

    ಪಿಎಸ್ ಐ ಇಮ್ರಾನ್ ಬೇಗ್ ಬಂದು ಹೇಳಿದರು ಕೇಳದ ಸಚಿವರ ಆಪ್ತ ಅಯುಬ್ ಪೈಲ್ವಾನ್ ಸೇರಿ ಇತರರು ಪೊಲೀಸರ ಜೊತೆಯೇ ವಾಗ್ವಾದ ನಡೆಸಿದ್ದಾನೆ. ಅಂಗಡಿ ಬಂದ್ ಮಾಡುವುದಿಲ್ಲ ಏನ್ ಮಾಡ್ತಿಯಾ ಮಾಡ್ಕೋ ಹೋಗೋ, ಕೇಸ್ ಮಾಡಿಕೊಳ್ತಿಯಾ ಮಾಡಿಕೋ ಹೋಗು, ನಮ್ಮ ಮನೆಯ ಮುಂದೆ ನಿಲ್ಲಬೇಡ, ಹೇಗೆ ಡ್ಯೂಟಿ ಮಾಡ್ತಿಯಾ ಎಂದು ಪಿಎಸ್ ಐ ಇಮ್ರಾನ್ ಬೇಗ್ ಗೆ ಧಮ್ಕಿ ಹಾಕಿದ್ದಾರೆ.

    ಇದೇ ವಿಚಾರಕ್ಕೆ ಪಿಎಸ್ ಐ ಮತ್ತು ಆಯುಬ್ ಪೈಲ್ವಾನ್ ಮಧ್ಯ ಮಾತಿನ ಚಕಮಕಿ ಕೂಡ ನಡೆದಿದೆ. ಇದೀಗ ಪೊಲೀಸರು ಅಯುಬ್  ಪೈಲ್ವಾನ್ ಸೇರಿದಂತೆ ಸಾದಿಕ್ ಪೈಲ್ವಾನ್, ಹಸೇನ್ ಮತ್ತು ಹಸೇನ್ ಎಂಬ ನಾಲ್ವರ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅನುಚಿತ ವರ್ತನೆ ತೋರಿರುವ ಬಗ್ಗೆ ಐಪಿಸಿ ಕಲಂ 341,504,506 ಮತ್ತು 186ರ ಅಡಿ ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

    June 7, 2025

    ತುಂಬು ಗರ್ಭೀಣಿ ಅನುಮಾನಾಸ್ಪದ ಸಾವು: ಮಂಡ್ಯದ ಮದ್ದೂರಿನಲ್ಲಿ ಹೃದಯ ವಿದ್ರಾವಕ ಘಟನೆ

    June 7, 2025

    ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ

    June 7, 2025

    ನೆಲಮಂಗಲ ಯುವಕನ ಕೊಲೆ ಪ್ರಕರಣ: ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿಕೆ ಬಾಬಾ ಹೇಳಿದ್ದೇನು..?

    June 7, 2025

    ಹುಬ್ಬಳ್ಳಿಯಲ್ಲಿ ಬಕ್ರೀದ್ ಆಚರಣೆ: ಮೂರು ಸಾವಿರ ಮಠಕ್ಕೆ ಭೇಟಿ ನೀಡಿದ ಮುಸ್ಲಿಂ ಸಮುದಾಯ!

    June 7, 2025

    ತ್ಯಾಗ – ಬಲಿದಾನದ ಸಂಕೇತ ಬಕ್ರೀದ್: ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

    June 7, 2025

    ಯುವತಿಗಾಗಿ ಸ್ನೇಹಿತರ ನಡುವೆ ಗಲಾಟೆ.. ಓರ್ವನ ಕೊಲೆಯಲ್ಲಿ ಅಂತ್ಯ – ಆರೋಪಿ ಎಸ್ಕೇಪ್!

    June 7, 2025

    ಬೇರೊಬ್ಬನ ಜೊತೆ ಚಕ್ಕಂದ ಆಡಲು ಪತಿ, ಅತ್ತೆ-ಮಾವ, ಮಕ್ಕಳಿಗೆ ವಿಷ ಹಾಕಲು ಯತ್ನಿಸಿದ ಲೇಡಿ!

    June 7, 2025

    ಜಾಮೀನು ರದ್ದು ಮಾಡಿದ ಸುಪ್ರೀಂ: ಮತ್ತೆ ಜೈಲು ಸೇರ್ತಾರಾ ವಿನಯ್ ಕುಲಕರ್ಣಿ!?

    June 6, 2025

    ಕಮಿಷನರ್ ದಯಾನಂದ್ ಸೇರಿ ಐವರು ಅಧಿಕಾರಿಗಳ ಅಮಾನತು ಸ್ವಾಗತಾರ್ಹ: ಬಸವರಾಜ ಹೊರಟ್ಟಿ!

    June 6, 2025

    ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ: ಡಿ.ಕೆ.ಸುರೇಶ್

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.