Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಗೃಹ ಸಚಿವರೇ ನೀವು ನೋಡಲೇಬೇಕಾದ ಸುದ್ದಿ- ಬೆಂಗಳೂರಿನ ಈ ಪೊಲೀಸ್ ಠಾಣೆಯಲ್ಲಿ ಪೊಲೀಸರೇ ಇಲ್ವಂತೆ

    By AIN AuthorNovember 22, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ರಾಜ್ಯದಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್‌ ಆಗಿ ಪೋಸ್ಟಿಂಗ್‌ ಪಡೆಯಲು ಬಹಳಷ್ಟು ಜನರು ಜಿದ್ದಾಜಿದ್ದಿ ನಡೆಸುತ್ತಿರುತ್ತಾರೆ. ಆದರೆ, ಬೆಂಗಳೂರಿನ ರಾಜಾಜಿನಗರ ಕೇಂದ್ರ ಭಾಗದಲ್ಲಿಯೇ ಇರುವ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಕಳೆದ ಒಂದು ತಿಂಗಳಿಂದ ಪೊಲೀಸ್‌ ಇನ್ಸ್‌ಪೆಕ್ಟರ್‌ ಇಲ್ಲದೇ ಅನಾಥವಾಗಿದೆ ಎನ್ನುವುದನ್ನು ಕೇಳಿದರೆ ಬೆಂಗಳೂರು ನಿವಾಸಿಗಳಿಗೆ ಸೋಜಿಗವಾಗುತ್ತದೆ. ಇನ್ನು ನಗರದ ಕೇಂದ್ರ ಭಾಗದಲ್ಲಿರುವ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣಗಳು ನಡೆಯುತ್ತಿದ್ದರೂ ಅವುಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಿ ವಿಲೇವಾರಿ ಮಾಡಲು ದಕ್ಷ ಅಧಿಕಾರಿಯೇ ಇಲ್ಲವೆಂದು ಹೇಳಲಾಗುತ್ತಿದೆ.

    ಇನ್ನು ಈ ಬಗ್ಗೆ ಶಾಸಕ ಎಸ್. ಸುರೇಶ್‌ ಕುಮಾರ್, ಈ ಬಗ್ಗೆ ಸರ್ಕಾರದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ಹಾಗೂ ಎಡಿಜಿಪಿ ಅವರ ಬಳಿ ರಾಜಾಜಿನಗರ ಪೊಲೀಸ್‌ ಠಾಣೆಗೆ ಒಬ್ಬ ದಕ್ಷ ಪೊಲೀಸ್‌ ಅಧಿಕಾರಿಯನ್ನು ನಿಯೋಜನೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಪತ್ರವೊಂದನ್ನು ಸಿದ್ಧಪಡಿಸಿ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ.

    ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆ ಕಳೆದ ಸುಮಾರು ಒಂದು ತಿಂಗಳಿನಿಂದ ಪೊಲೀಸ್ ಇನ್ಸ್‌ಪೆಕ್ಟರ್ ಇಲ್ಲದೆ ಒಂದು ರೀತಿ ಅನಾಥವಾಗಿದೆ. ದಿನಾಂಕ: 20.09.2023 ರಂದು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಈ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದರು. ಅಂದಿನಿಂದ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕಾಣೆಯಾಗಿದ್ದರು. ಅವರು ನಿರೀಕ್ಷಣಾ ಜಾಮೀನು ಪಡೆಯಲು ಪ್ರಯತ್ನಿಸಿದ ವಿದ್ಯಮಾನವೂ ನಡೆಯಿತು.

    ನಂತರ ದಿನಾಂಕ: 02.11.2023 ರಂದು ಆ ಪೊಲೀಸ್ ಇನ್ಸ್‌ಪೆಕ್ಟರ್ ಅನ್ನು ಅಮಾನತ್ತು ಮಾಡಲಾಯಿತು. ನಾನು ಈ ಕುರಿತು ಗೃಹ ಸಚಿವರ ಬಳಿ, ನಗರದ ಪೊಲೀಸ್ ಆಯುಕ್ತರ ಬಳಿ ಹಾಗೂ ಎಡಿಜಿಪಿ ರವರ ಬಳಿ ಈ ಠಾಣೆಗೆ ಓರ್ವ ಸೂಕ್ತ, ದಕ್ಷ ಅಧಿಕಾರಿಯನ್ನು ನೇಮಿಸಲು ಮನವಿ ಮಾಡಿದ್ದೇನೆ. ರಾಜ್ಯದ ರಾಜಧಾನಿಯ ಒಂದು ಪ್ರಮುಖ ಪೊಲೀಸ್ ಠಾಣೆ ಅನಾಥ ಸ್ಥಿತಿಯಲ್ಲಿ ಬಳಲುವುದು ಆರೋಗ್ಯಕರವಲ್ಲ. ಈ ಕೂಡಲೇ, ಈ ಠಾಣೆಗೆ ಓರ್ವ ದಕ್ಷ ಅಧಿಕಾರಿಯನ್ನು ನಿಯುಕ್ತಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಸೂಟ್​ಕೇಸ್​ನಲ್ಲಿ ಬಾಲಕಿ ಶವ ಪತ್ತೆ ಕೇಸ್: ಪ್ರಕರಣ ಬೇಧಿಸಿದ ಪೊಲೀಸರಿಗೆ ಅಚ್ಚರಿ ಮಾಹಿತಿ ರಿವೀಲ್!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025

    ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

    June 8, 2025

    ಕಾಲ್ತುಳಿತ ಕೇಸ್: ಇದೊಂದು ಬೇವರ್ಸಿ ಸರ್ಕಾರ- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆರ್ ಅಶೋಕ್!

    June 8, 2025

    ಬೆಂಗಳೂರಿನಲ್ಲಿ ನಕಲಿ ಸಿಗರೇಟ್ ಮಾರಾಟ: ಕೇರಳ ಮೂಲದ ಇಬ್ಬರು ಅರೆಸ್ಟ್!

    June 8, 2025

    ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕು: 5 ದಿನ ವ್ಯಾಪಕ ಮಳೆ ಸಾಧ್ಯತೆ!

    June 8, 2025

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.