Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವುದು ದುರುದ್ದೇಶಪೂರಿತ: ಅರ್ಜುನ ಹಲಗಿಗೌಡರ

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಬಾಗಲಕೋಟೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪವು ಗಂಭೀರ ಸ್ವರೂಪದ್ದಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಾಲಿಂಗಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಪ್ರಕರಣದ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಜೆಯಲು ರಾಜ್ಯ ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಅಕ್ಷಮ್ಯ. ಇದನ್ನು ಆಮ್ ಆದ್ಮಿ ಪಕ್ಷ ಖಡಾಖಂಡಿತವಾಗಿ ತಿರಸ್ಕರಿಸುತ್ತದೆ ಎಂದು ಅರ್ಜುನ ಹಲಗಿಗೌಡರ ಆಮ್ ಆದ್ಮಿ ಪಕ್ಷ ಉತ್ತರ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಹೇಳಿದರು.

    ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿದೆ. ಚಾರ್ಜ್‌ಶೀಟ್‌ ಹಾಕುವ ಹಂತಕ್ಕೆ ಬಂದಿದೆ. ಮುಕ್ತಾಯ ಹಂತದಲ್ಲಿರುವ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆಯುವುದು ದುರುದ್ದೇಶಪೂರಿತವಾಗಿದೆ. ಈ ನಿರ್ಧಾರ ಕಾನೂನಿಗೆ ವಿರುದ್ಧವಾಗಿದೆ ಎಂದರು. ಜನಸಮಾನ್ಯರ, ರೈತರ ಆಸ್ತಿಗಳಲ್ಲಿ ಕೊಂಚವೂ ಹೆಚ್ಚಾಗುವುದಿಲ್ಲ. ಆದರೆ ರಾಜಕಾರಣಿಗಳ ಆಸ್ತಿ ನೂರಾರು ಪಟ್ಟು ಹೆಚ್ಚಾಗುವುದು ಹೇಗೆ? 2013-18ರ ಐದು ವರ್ಷದಲ್ಲಿ ಶಿವಕುಮಾರ್‌ ಅವರ ಆಸ್ತಿ ಶೇ 380ರಷ್ಟು ಏರಿಕೆಯಾಗಿದೆ.

    ಇದು ಹೇಗೆ ಸಾಧ್ಯವಾಯ್ತು ಎಂಬುದಕ್ಕೆ ಆಧಾರ ಬೇಕಲ್ಲವೇ? ಒಟ್ಟಿನಲ್ಲಿ ಡಿ.ಕೆ.ಶಿವಕುಮಾರ್‌ ಅವರನ್ನು ರಕ್ಷಣೆ ಮಾಡಲು ರಾಜ್ಯ ಸರ್ಕಾರ ಈ ಹಾದಿಯನ್ನು ತುಳಿದಿದೆ. ತಪ್ಪು ಮಾಡಿಲ್ಲ ಎಂದಾದರೆ ಸಂಪೂರ್ಣ ತನಿಖೆಯನ್ನು ಎದುರಿಸಿ ದೋಷಮುಕ್ತರಾಗಬೇಕು. ತಮ್ಮ ಆದಾಯ ಮೂಲವನ್ನು ತೋರಿಸಿ ಅಕ್ರಮ ಆಸ್ತಿಯಲ್ಲವೆಂದು ನಿರೂಪಿಸಬೇಕು. ಆದರೆ ತನಿಖೆಯನ್ನೇ ಮಾಡದಂತೆ ನಿರ್ಬಂಧ ಹೇರುತ್ತಾರೆ ಎಂದರೆ ಡಿ.ಕೆ.ಶಿವಕುಮಾರ್‌ ತಪ್ಪಿತಸ್ಥರು ಎಂದಾಗುತ್ತದೆಯಲ್ಲವೇ? ಎಂದು ಅರ್ಜುನ ಹಲಗಿಗೌಡರ ಅವರು ಪ್ರಶ್ನಿಸಿದರು.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಸಹ ತಮಗೆ ಬೇಕಾಗಿರುವ ರೀತಿ ಕಾನೂನು ವ್ಯಾಖ್ಯಾನಗಳನ್ನು ನೀಡುವ ಮೂಲಕ ಸಿಬಿಐ ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ನಿನ್ನೆಯ ಸಂಪುಟ ಸಭೆಯ ನಿರ್ಧಾರದಿಂದ ಸ್ಪಷ್ಟವಾಗುತ್ತಿದೆ. ಸರ್ಕಾರಗಳು ಬದಲಾದಂತೆ ತೀರ್ಮಾನ ಬದಲಾವಣೆ ಒಳ್ಳೆಯ ಸಂಪ್ರದಾಯ ಅಲ್ಲ. ಹಿಂದಿನ ಬಿಜೆಪಿ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಮುನ್ನ ಸ್ಪೀಕರ್‌ ಅನುಮತಿ ಪಡೆದಿರಲಿಲ್ಲ ಎಂಬ ಸಬೂಬು ನೀಡುವುದು ತಪ್ಪು. ರಾಜ್ಯ ಸರ್ಕಾರ ಕೂಡಲೇ ಈ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ, ತನಿಖೆಗೆ ಸಹಕರಿಸಬೇಕು ಎಂದು ಅರ್ಜುನ ಹಲಗಿಗೌಡರ ಅವರು ಒತ್ತಾಯಿಸಿದರು.

    ಕೇಂದ್ರ ಸರ್ಕಾರವು ಕೇವಲ ತನ್ನ ರಾಜಕೀಯ ದುರುದ್ದೇಶಗಳಿಗೆ ಮಾತ್ರ ವಿರೋಧ ಪಕ್ಷಗಳ ನಾಯಕರುಗಳ ಮೇಲೆ ಈ ರೀತಿಯ ತನಿಖೆಗಳನ್ನು ಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಚಟುವಟಿಕೆಗಳಾಗಿವೆ. ವಿರೋಧ ಪಕ್ಷದಲ್ಲಿದ್ದಾಗ ಕಡು ಭ್ರಷ್ಟರು, ತಮ್ಮ ಪಕ್ಷದಲ್ಲಿದ್ದಾಗ ಶುದ್ಧಹಸ್ತರು ಎಂಬ ಧೋರಣೆಯನ್ನು ಅನುಸರಿಸುತ್ತಿದೆ. ಅಜಿತ್ ಪವಾರ್, ಮುಕುಲ್ ರಾಯ್, ಏಕನಾಥ್ ಶಿಂದೆ, ಹಿಮಾಂತ ಬಿಸ್ವಾ ಶರ್ಮಾ, ಸುವೆಂದು ಅಧಿಕಾರಿ, ನಾರಾಯಣ ರಾಣೆ, ಜ್ಯೋತಿರಾದಿತ್ಯ ಸಿಂದಿಯಾ ಸೇರಿದಂತೆ ಅನೇಕ ಪ್ರಮುಖ ನಾಯಕರನ್ನು ಹೆದರಿಸಿ ಬಿಜೆಪಿ ತಮ್ಮ ಪಕ್ಷಕ್ಕೆ ಸೇರಿಸಿಕೊಂಡಿತು.

    ನಂತರ ಅವರ ಮೇಲಿನ ಎಲ್ಲ ಅಕ್ರಮ ಪ್ರಕರಣಗಳ ವಿರುದ್ಧದ ತನಿಖೆಯನ್ನು ಕೈಬಿಟ್ಟಿತು. ಅವರೆಲ್ಲರೂ ಭ್ರಷ್ಟರಾದ ಕಾರಣ ವಿಧಿಯಿಲ್ಲದೆ ಮೂಲ ಪಕ್ಷವನ್ನು ತ್ಯಜಿಸಿ ಬಿಜೆಪಿ ಸೇರಿಕೊಂಡರು. ಪ್ರಪಂಚವೇ ಮಾತಾಡುವಂತಹ ಮಾದರಿ ಶಿಕ್ಷಣಕ್ರಾಂತಿ ಹಾಗೂ ಆರೋಗ್ಯ ಕ್ರಾಂತಿಗಳನ್ನು ರಾಜಕೀಯ ಆಂದೋಲನಗಳ ಮೂಲಕ ಯಶಸ್ವಿಯಾಗಿ ಮಾಡಿರುವಂತಹ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರುಗಳಾದ ಸತ್ಯೇಂದ್ರ ಜೈನ್, ಮನಿಶ್‌ ಸಿಸೋಡಿಯ ಹಾಗೂ ಸಂಜಯ್ ಸಿಂಗ್ ಇಂದು ಸೆರೆಮನೆ ವಾಸದಲ್ಲಿದ್ದಾರೆ. ಅವರು ಬಿಜೆಪಿಯ ಒತ್ತಡ, ಅಧಿಕಾರಗಳ ಅಮಿಷ ಹಾಗೂ ಬೆದರಿಕೆಗಳಿಗೆ ತಲೆಬಾಗಲಿಲ್ಲ.

    ತನಿಖಾ ಸಂಸ್ಥೆಯು ಇವರಿಂದ ನಯ ಪೈಸೆಯನ್ನು ವಶಪಡಿಸಿಕೊಳ್ಳದಿದ್ದರು, ಆರೋಪವನ್ನು ಸಾಬೀತು ಪಡಿಸದಿದ್ದರೂ, ಪದೇ ಪದೇ ಸರ್ವೋಚ್ಚ ನ್ಯಾಯಾಲಯದ ಛೀಮಾರಿಗೆ ಒಳಗಾದರೂ ಸಹ ಸುಳ್ಳುಸುಳ್ಳು ಕೇಸ್ ಗಳನ್ನು ಹಾಕಿ ಜೈಲಿಗೆ ಕಳುಹಿಸಿದ್ದಾರೆ. ಮೋದಿ ನಿರಂಕುಶಪ್ರಭುತ್ವದ ಈ ದೇಶದಲ್ಲಿ ಪ್ರಾಮಾಣಿಕ ರಾಜಕಾರಣಕ್ಕೆ ಭಾರಿ ಬೆಲೆ ತೆರೆ ತೆರಬೇಕಾಗುತ್ತದೆ ಎಂದು ಅರ್ಜುನ ಅವರು ಬೇಸರ ವ್ಯಕ್ತಪಡಿಸಿದರು. ದೇಶದಲ್ಲಿ ಜನಸಾಮಾನ್ಯರಿಗೂ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳಿಗೂ ಒಂದೇ ರೀತಿಯ ನ್ಯಾಯದಾನ ವ್ಯವಸ್ಥೆಯು ದೇಶದಲ್ಲಿ ಇರಬೇಕೆಂಬುದು ಆಮ್ ಆದ್ಮಿ ಪಕ್ಷದ ತತ್ವ ಸಿದ್ಧಾಂತಗಳಲ್ಲಿ ಒಂದಾಗಿದೆ ಎಂದು ಅರ್ಜುನ ಅವರು ಪ್ರತಿಪಾದಿಸಿದರು.

    ಪ್ರಕಾಶ ಕುಂಬಾರ
    ಬಾಗಲಕೋಟೆ

    Demo
    Share. Facebook Twitter LinkedIn Email WhatsApp

    Related Posts

    ಮಂಗಳೂರಿನಲ್ಲಿ ಪೊಲೀಸರ ದುಂಡಾವರ್ತನೆ ಜಾಸ್ತಿಯಾಗಿದೆ: ಬಿವೈ ವಿಜಯೇಂದ್ರ!

    June 9, 2025

    ಬಡವರ ಕಷ್ಟಕ್ಕೆ ಅಧಿಕಾರಿಗಳು ಕೂಡಲೆ ಸ್ಪಂದಿಸಬೇಕು:: ಶಾಸಕ ಸಿದ್ದು ಸವದಿ

    June 9, 2025

    ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

    June 9, 2025

    ಮದ್ದೂರು ನಗರಸಭೆ ಸೇರ್ಪಡೆಗೆ ಶುರುವಾಯ್ತು ಎಲ್ಲೆಡೆ ತೀವ್ರ ವಿರೋಧ: ಸೋಮನಹಳ್ಳಿ ಗ್ರಾಪಂ ಮುಂದೆ ಬೃಹತ್ ಪ್ರತಿಭಟನೆ

    June 9, 2025

    ನವೋದಯ ಗ್ರಾಮೀಣ ಅರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರದಿಂದ ಸಾರ್ವಜನಿಕರಿಗೆ ಹಾವುಗಳ ಕುರಿತು ಅರಿವು

    June 9, 2025

    ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ: ಪ್ರತಾಪ್ ಸಿಂಹ

    June 9, 2025

    ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

    June 9, 2025

    ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ

    June 9, 2025

    ನಟ ಕಮಲ್ ಹಾಸನ್ ವಿರುದ್ಧ ವಿದ್ಯಾವರ್ಧಕ ಸಂಘದಿಂದ ಪ್ರತಿಭಟನೆ

    June 9, 2025

    IPL ಕಾಲ್ತುಳಿತ ವಿಚಾರ; ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಜೋಶಿ

    June 9, 2025

    ಮೋದಿ ಸರ್ಕಾರದ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ: ಸಿಎಂ ಸಿದ್ದರಾಮಯ್ಯ

    June 9, 2025

    ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು PDOದೆ ದರ್ಬಾರ್: ಕಾಸಿದ್ರೆ ಮಾತ್ರ ಫೈಲ್ ಮುಂದಕ್ಕೆ ಇಲ್ಲದಿದ್ರೆ ಹಿಂದಕ್ಕೆ…!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.