Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    BBMP: ಇಂದಿರಾ ಕ್ಯಾಂಟೀನ್ ಟಾಯ್ಲೆಟ್‌ಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ: ತುಷಾರ್ ಗಿರಿನಾಥ್ ಆದೇಶ

    By AIN AuthorNovember 29, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಸ್ಥಳಗಳನ್ನು ಗುರುತಿಸಿ ಕೂಡಲೆ ಪಟ್ಟಿ ನೀಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ವಲಯ ಆಯುಕ್ತರಿಗೆ ಸೂಚನೆ ನೀಡಿದರು.

    ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ಇಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯ ಸಭಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಆಯಾ ವಲಯ ವ್ಯಾಪ್ತಿಯಲ್ಲಿ ಜನದಟ್ಟಣೆ ಪ್ರದೇಶ, ಮಾರುಕಟ್ಟೆಗಳು, ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ತ್ವರಿತವಾಗಿ ಸ್ಥಳಗಳನ್ನು ಗುರುತಿಸಿ ಪಟ್ಟಿ ನೀಡಲು ಸೂಚಿಸಲಾಯಿತು.

    ನಗರದಲ್ಲಿ ಈಗಾಗಲೇ 255 ಸ್ಥಳಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು, ಶೌಚಾಲಯಗಳನ್ನು ನಿರ್ಮಿಸುವ ಸ್ಥಳ ವಿಶಾಲವಾಗಿರಬೇಕಿದೆ. ಈ ಸಂಬಂಧ ವಿಶಾಲವಾದ ಸ್ಥಳಗಳನ್ನು ಗುರುತಿಸಬೇಕಿದೆ. ಜೊತೆಗೆ ನಗರದ ಕೇಂದ್ರ ಪ್ರದೇಶದಲ್ಲಿ ಹೆಚ್ಚಾಗಿ ಶೌಚಾಲಯಗಳನ್ನು ನಿರ್ಮಿಸಬೇಕು. ಈ ಪೈಕಿ ಸೂಕ್ತ ಸ್ಥಳಗಳನ್ನು ಗುರುತಿಸಬೇಕು. ಅಲ್ಲದೆ ಹೊಸದಾಗಿ 46 ಶೌಚಾಲಯಗಳನ್ನು ನಿರ್ಮಾಣ ಮಾಡಲು ಕೂಡಾ ಸೂಕ್ತ ಸ್ಥಳಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು.

    ನಗರದಲ್ಲಿ 393 ಸಾರ್ವಜನಿಕ ಶೌಚಾಲಯಗಳಿದ್ದು, ಈ ಪೈಕಿ 360 ಸಾರ್ವಜನಿಕ ಶೌಚಾಲಯ, 6 ಕಮ್ಯುನಿಟಿ ಶೌಚಾಲಯ, 17 ಮಾಡ್ಯುಲಾರ್ ಶೌಚಾಲಯ ಹಾಗೂ 10 ಪ್ರೀಕಾಸ್ಟ್ ಶೌಚಾಲಯಗಳಿವೆ. ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ವರಿತಗತಿಯಲ್ಲಿ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಬೇಕೆಂದು ಹೇಳಿದರು.

    ಮಹಿಳಾ ಶೌಚಾಲಯ(She Toilets) ನಿರ್ಮಾಣಕ್ಕೆ ಆದ್ಯತೆ:

    ನಗರದಲ್ಲಿ ಮಹಿಳೆಯರು ಸಂಚರಿಸುವ/ಓಡಾಡುವ ಸ್ಥಳಗಳನ್ನು ಗುರುತಿಸಿ ಮಹಿಳಾ ಶೌಚಾಲಯ(She Toilets)ಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಪೈಕಿ ಎಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿದೆ ಎಂಬುದನ್ನು ಗುರುತಿಸಿ ಮಹಿಳಾ ಶೌಚಾಲಯ ನಿರ್ಮಾಣ ಮಾಡಲು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಇ-ಶೌಚಾಲಯ ಸರಿಯಾಗಿ ನಿರ್ವಹಣೆ ಮಾಡಿ:

    ನಗರದಲ್ಲಿ 229 ಇ-ಶೌಚಾಲಯಗಳಿದ್ದು, ಸದ್ಯ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಎಲ್ಲವನ್ನೂ ಸ್ಥಗಿತಗೊಳಿಸಲಾಗಿದೆ. ಇ-ಶೌಚಾಲಯಗಳನ್ನು ಸರಿಯಾಗಿ ನಿರ್ವಹಣೆ ಮಾಡುವ ಸಲುವಾಗಿ ಕೂಡಲೆ ಟೆಂಡರ್ ಕರೆದು ಸರಿಯಾಗಿ ನಿರ್ವಹಣೆ ಮಾಡಲು ಸೂಚಿಸಿದರು. ಜೊತೆಗೆ ಬಸ್ ತಂಗುದಾಣಗಳ ಬಳಿ ಇ-ಶೌಚಾಲಯಗಳನ್ನು ಅಳವಡಿಸು ಸಾಧ್ಯವೇ ಎಂಬುದನ್ನು ಪರಿಶೀಲಿಸಿ ಸಾಧ್ಯವಾದಲ್ಲಿ ಕೆಲ ಪ್ರಮುಖ ಬಸ್ ತಂಗುದಾನಗಳ ಬಳಿ ಇ-ಶೌಚಾಲಯಗಳನ್ನು ಅಳವಡಿಸಲು ಸೂಚಿಸಿದರು.

    ಇಂದಿರಾ ಕ್ಯಾಂಟೀನ್ ನಲ್ಲಿರುವ ಶೌಚಾಲಯ ಸಾರ್ವಜನಿಕರಿಗೆ ಬಳಕೆ:

    ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ನಿರ್ಮಿಸಿರುವ ಶೌಚಾಲಯಗಳನ್ನು ಸಾರ್ವಜನಿಕರು ಉಪಯೋಗಿಸಲು ಅನುವು ಮಾಡಬೇಕು. ಈ ಸಂಬಂಧ ಕೂಡಲೆ ಆದೇಶ ಹೊರಡಿಸಲು ಅಧಿಕಾರಿಗೆ ಸೂಚನೆ ನೀಡಲಾಯಿತು.

    ನಗರದಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಸಂಕ್ಷಿಪ್ತ ಯೋಜನೆಗಳನ್ನು ರೂಪಿಸುವ ಸಲುವಾಗಿ ಸಮಿತಿ ರಚನೆ:

    ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ನಿರ್ದೇಶನದನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಸಂಕ್ಷಿಪ್ತ ಯೋಜನೆಗಳನ್ನು ರೂಪಿಸುವ ಕುರಿತು ಸ್ಥಳೀಯ ಸಂಸ್ಥೆಗಳ ಹಂತದಲ್ಲಿ ಸಮಿತಿಗಳನ್ನು ರಚಿಸಲು ಆದೇಶಿಲಾಗಿರುತ್ತದೆ. ಅದರಂತೆ ಘನ ಕರ್ನಾಟಕ ಸರ್ಕಾರದ ಆದೇಶದನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಹಾಗೂ ನಿರ್ವಹಣೆ ಮಾಡುವ ಸಂಕ್ಷಿಪ್ತ ಯೋಜನೆಗಳನ್ನು (Comprehensive Schemes) ರೂಪಿಸುವ ಕುರಿತು ಈ ಕೆಳಕಂಡಂತೆ ಸಮಿತಿಯನ್ನು ರಚಿಸಲಾಗಿದೆ.

    ಸಮಿತಿಯ ವಿವರ:

    ಅಧ್ಯಕ್ಷರು:

    1. ಮುಖ್ಯ ಆಯುಕ್ತರು, ಬಿ.ಬಿ.ಎಂ.ಪಿ

    ಸದಸ್ಯರು:

    2. ವಿಶೇಷ ಆಯುಕ್ತರು (ಘ.ತ್ಯಾ.ನಿ)
    3. ವಿಶೇಷ ಆಯುಕ್ತರು (ಕಲ್ಯಾಣ)
    4. ಎಲ್ಲಾ ವಲಯ ಆಯುಕ್ತರು(ಪೂರ್ವ, ಪಶ್ಚಿಮ,ದಕ್ಷಿಣ,ಯಲಹಂಕ,ಆರ್.ಆರ್.ನಗರ,ದಾಸರಹಳ್ಳಿ,ಬೊಮನಹಳ್ಳಿ ಹಾಗೂ ಮಹದೇವಪುರ ವಲಯ).
    5. ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು (ರಸ್ತೆ ಮೂಲ ಭೂತ ಸೌಕರ್ಯ)
    6. ಮುಖ್ಯ ಅಭಿಯಂತರರು (ಘ.ತ್ಯಾ.ನಿ)
    7. ಮಹಿಳಾ ಸದಸ್ಯರು (ಕೌನ್ಸಿಲರ್)
    8. ಮುಖ್ಯ ಆರೋಗ್ಯಾಧಿಕಾರಿಗಳು (ಸಾರ್ವಜನಿಕ)
    9. ಉಪ ಆಯುಕ್ತರು (ಕಲ್ಯಾಣ)
    10. NGO ಓರ್ವ ಸಕ್ರಿಯ ಮಹಿಳಾ ಪ್ರತಿನಿಧಿ

    ಸದಸ್ಯ ಕಾರ್ಯದರ್ಶಿ:

    11. . ಜಂಟಿ ಆಯುಕ್ತರು(ಘ.ತ್ಯಾ.ನಿ)

    ಸಭೆಯಲ್ಲಿ ಘನತ್ಯಾಜ್ಯ ವಿಭಾಗದ ವಿಶೇಷ ಅಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಕಲ್ಯಾಣ ವಿಶೇಷ ಆಯುಕರಾದ ರೆಡ್ಡಿ ಶಂಕರ ಬಾಬು, ಎಲ್ಲಾ ವಲಯ ಆಯುಕ್ತರು, ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರಾದ ಪ್ರತಿಭಾ, BSWML ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಮೆಟ್ರೋಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

    June 18, 2025

    ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳು 6,483ಕ್ಕೆ ಇಳಿಕೆ..! ಸಾವಿನ ಸಂಖ್ಯೆ 113 ಕ್ಕೆ ಏರಿಕೆ

    June 18, 2025

    ನಮ್ಮ ನಂದಿನಿ ಒಕೆ.. ಅಮುಲ್ ಯಾಕೆ? BMRCL ನಡೆಗೆ ಸಾರ್ವಜನಿಕರಿಂದ ಆಕ್ಷೇಪ – JDS ವಾಗ್ದಾಳಿ

    June 18, 2025

    Amit Shah: ಜೂನ್ 19ಕ್ಕೆ ಕರ್ನಾಟಕಕ್ಕೆ ಬರಲಿದ್ದಾರೆ ಚುನಾವಣಾ ಚಾಣಕ್ಯ ಅಮಿತ್ ಶಾ..!

    June 18, 2025

    ಲಿಕ್ಕರ್ ಹಗರಣ: ಆಂಧ್ರದ YSRCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬಂಧನ..!

    June 18, 2025

    ಬೆಂಗಳೂರಿಗರೇ ಗಮನಿಸಿ​​​! ನಾಳೆ ಕಾವೇರಿ ನೀರು ಸರಬರಾಜು ಬಂದ್​​!

    June 18, 2025

    ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಯಲ್ಲಿ ಜೋರು ಮಳೆ, ಉಳಿದೆಡೆ ಸಾಧಾರಣ ಮಳೆ!

    June 18, 2025

    ಮದ್ಯ ಹಗರಣ: ಬೆಂಗಳೂರಿನಲ್ಲಿ ಆಂಧ್ರದ YS​RCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅರೆಸ್ಟ್!

    June 18, 2025

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025

    Post Office: ಸೂಪರ್ ಸ್ಕೀಮ್.. ಪ್ರತಿ ದಿನ 333 ರೂಪಾಯಿ ಸೇವ್ ಮಾಡಿ, 17 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತೆ!

    June 18, 2025

    ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!

    June 17, 2025

    ಇಡಿಯಿಂದ ಸಮನ್ಸ್ ಬಂದಿದೆ, ಅವರು ಹೇಳಿದ ದಿನ ವಿಚಾರಣೆಗೆ ಹೋಗಲು ಆಗಲ್ಲ: ಡಿಕೆ ಸುರೇಶ್!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.