Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    KS Eshwarappa: ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗೋದ್ರಲ್ಲಿ ಸಂಶಯ ಇಲ್ಲ – ಕೆಎಸ್​ ಈಶ್ವರಪ್ಪ

    By AIN AuthorNovember 30, 2023
    Share
    Facebook Twitter LinkedIn Pinterest Email
    Demo

    ಗದಗ:- ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗ್ತಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು,ಲೋಕಸಭೆ ಚುನಾವಣೆ ಬಳಿಕ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್​​ ಜೈಲಿಗೆ ಹೋಗುತ್ತಾರೆ. ಡಿಕೆ ಶಿವಕುಮಾರ್ ಮನೆಯಲ್ಲಿ ಸಿಬಿಐ ರೇಡ್ ಆದಾಗ ನೂರಾರು ಕೋಟಿ ರೂ. ಅಕ್ರಮ‌ ದಾಖಲೆಗಳು ಸಿಕ್ತು. ವಿಚಾರಣೆ ಮುಗಿದು ಚಾರ್ಜಶಿಟ್ ಹಾಕುವಂಥ ಸಂದರ್ಭ ಇತ್ತು. ತಮ್ಮ ಕೈಯಲ್ಲಿ ಸರ್ಕಾರ ಇದೆ ಅಂತಾ ಹೈಕಮಾಂಡ್ ಒತ್ತಡಕ್ಕೆ ಒಳಗಾಗಿದ್ದರು ಎಂದಿದ್ದಾರೆ.

    ಹೈಕಮಾಂಡ್ ಕೈಗೊಂಬೆಯಾಗಿ ಡಿಕೆ ಶಿವಕುಮಾರ್​ ಮೇಲಿನ ಕೇಸನ್ನು ವಿತ್ ಡ್ರಾ ಮಾಡಿದರು. ತಾತ್ಕಾಲಿಕ ರಿಲೀಫ್ ಅಷ್ಟೇ ಸಿಕ್ಕಿದೆ. ಆದರೆ ಎಫ್​ಐಆರ್​ ವಿತ್ ಡ್ರಾ ಮಾಡಿಲ್ಲ. ಲೋಕಸಭೆ ಚುನಾವಣೆ ಬಳಿಕ ಮತ್ತೆ ಜೈಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ.

    ಐಟಿ, ಇಡಿ, ಸಿಬಿಐ ಇವೆಲ್ಲ ಸ್ವಾಯತ್ತ ಸಂಸ್ಥೆಗಳು. ಹಾಗಾದರೆ ಕಾಂಗ್ರೆಸ್‌ನಲ್ಲಿದ್ದು ಎಷ್ಟು ಬೇಕಾದರೂ ಲೂಟಿ‌ ಮಾಡಬಹುದಾ. ಯಾವುದೇ‌ ಕಾರಣಕ್ಕೂ ಕಾಂಗ್ರೆಸ್​ನವರನ್ನು ಮುಟ್ಟಬಾರದು ಅಂತ‌ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಇಡೀ ದೇಶದಲ್ಲಿ ಸಿಬಿಐನವರು ಎಲ್ಲ ಪಕ್ಷದವರನ್ನ ಮುಟ್ಟಿದ್ದಾರೆ. ಸಾವಿರಾರು‌ ಕೋಟಿ ರೂ. ಸಿಗುತ್ತಿರುವುದು ಕಾಂಗ್ರೆಸ್​ನಲ್ಲಿ ಎಂದು ಕಿಡಿಕಾರಿದ್ದಾರೆ.

    ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಪಸ್ ಬಿಜೆಪಿಗೆ ಬರಬೇಕು ಎನ್ನುವ ಅಪೇಕ್ಷೆಯಿದೆ. ಜಗದೀಶ ಶೆಟ್ಟರ್​ ನನ್ನ ಆತ್ಮೀಯ ಸ್ನೇಹಿತ. ಅವರಪ್ಪ ಕೂಡ ಬಿಜೆಪಿಯಲ್ಲಿದ್ದವರು. ಜನಸಂಘದಿಂದ ಕಾಲದಿಂದಲೂ‌ ಬಂದವರು. ಹಿಂದುತ್ವದ ರಕ್ತ ಅವರ ಮೈಯಲ್ಲಿ ಹರಿಯುತ್ತಿದೆ. ಇನ್ನೇನು ಸ್ವಲ್ಪ ದಿನಕ್ಕೆ ನಮ್ಮ ಕಡೆಗೆ ಬರುತ್ತಾರೆ ಎಂದು ಹೇಳಿದ್ದಾರೆ.

    ಕರ್ನಾಟದಲ್ಲಿ ಕಾಂಗ್ರೆಸ್ ಬಿಟ್ಟರೆ ದೇಶದಲ್ಲಿ ಎಲ್ಲಿದೆ. ಅಲ್ಲೊಂದು,‌ ಇಲ್ಲೊಂದು, ಮತ್ತೊಂದು ಅಂತ ಹುಡುಕಬೇಕಷ್ಟೇ. ಕಾಂಗ್ರೆಸ್ ಹೋಗಿದ್ದಕ್ಕಾದರೂ ಶೆಟ್ಟರ್​ ಕಾಂಗ್ರೆಸ್ ಪರವಾಗಿ ಮಾತನಾಡಬೇಕು. ಕಾಂಗ್ರೆಸ್ ಹೋಗಿರೋ ಶೆಟ್ಟರ ಬಿಜೆಪಿಯನ್ನ ಹೊಗಳೋಕಾಗುತ್ತಾ? ನನಗಂತೂ ಜಗದೀಶ ಶೆಟ್ಟರ್ ಬಿಜೆಪಿಗೆ ಬರುವ ಅಪೇಕ್ಷೆ ಇದೆ. ಅವರು ಬಂದರೆ ಬಹಳ ಸಂತೋಷ ಎಂದರು.

    ಭೀಕರ ಬರ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನೂರು ರೂ. ಕೂಡ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಗದಗ ಡಿಸಿ ವೈಶಾಲಿ ಅವ್ರೇ ಹೇಳಿದ್ದಾರೆ. ಗದಗ ಡಿಸಿ ಜೊತೆ ನಾನು ಮಾತನಾಡಿದ್ದೇನೆ. ಬರ ಪರಿಹಾರ ಬಂದಿಲ್ಲ ಅಂತ ಹೇಳಿದ್ದಾರೆ. ಶಿವಮೊಗ್ಗಾ ತಾಲೂಕಿಗೂ ಕೇಳಿದ್ದೇನೆ ಅಲ್ಲೂ ಬಂದಿಲ್ಲ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಭೀಕರ ಅಪಘಾತ: ಕಾರಿನ ಟೈಯರ್ ಬ್ಲಾಸ್ಟ್ ಆಗಿ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ!

    June 19, 2025

    ನನಗೆ ಹುಷಾರಿಲ್ಲ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಯುವಕ ಆತ್ಮಹತ್ಯೆ..! ಕಾರಣ ನಿಗೂಢ

    June 19, 2025

    ರಸ್ತೆಗೆ ವಾಲಿಕೊಂಡಿರುವ ವಿದ್ಯುತ್ ಕಂಬಗಳು: ಕೂಡಲೇ ಸರಿಪಡಿಸುವಂತೆ ಹೆಸ್ಕಾಂ ಅಧಿಕಾರಿಗೆ ಸೂಚನೆ

    June 19, 2025

    ಕೊನೆಗೂ ಇಸ್ರೇಲ್ ನಿಂದ ಕನ್ನಡಿಗರಿಗೆ ಮುಕ್ತಿ: ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ ಬಿಪ್ಯಾಕ್ ನಿಯೋಗ!

    June 19, 2025

    ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ!

    June 19, 2025

    ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮಹಾ ಎಡವಟ್ಟು: ಸತ್ತ ಶಿಶುವನ್ನು 8 ದಿನವಾದ್ರೂ ತಾಯಿಗೆ ತೋರಿಸದ ವೈದ್ಯರು!

    June 18, 2025

    ಕೌಟುಂಬಿಕ ಕಲಹ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ!

    June 18, 2025

    ಮಲೆ ಮಹದೇಶ್ಚರ ಕೋಟಿ ಒಡೆಯ: 2.65 ಕೋಟಿ ಕಾಣಿಕೆ ಸಂಗ್ರಹ!

    June 18, 2025

    ಹುಡುಗಿ ವಿಚಾರಕ್ಕೆ ಕಿರಿಕ್: ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್! Video Viral

    June 18, 2025

    ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ!

    June 18, 2025

    ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ವರ್ಗಾವಣೆ: ಜಿಲ್ಲಾಡಳಿತದಿಂದ ಬೀಳ್ಕೊಡುಗೆ!

    June 18, 2025

    ಮಾಜಿ ಸಿಎಂ ಸದಾನಂದ ಗೌಡ ಶ್ರೀನಿವಾಸಪುರಕ್ಕೆ ಭೇಟಿ: ಮಾವಿನ ಪಸಲು ವೀಕ್ಷಣೆ

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.