Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Renukacharya: ಯಾರು ಬಿಜೆಪಿ ಬಿಟ್ಟು ಹೋಗುವುದಿಲ್ಲ: ರೇಣುಕಾಚಾರ್ಯ

    By AIN AuthorDecember 2, 2023
    Share
    Facebook Twitter LinkedIn Pinterest Email
    Demo

    ದಾವಣಗೆರೆ: ಬಿಜೆಪಿ ಬಿಟ್ಟು ಶಾಸಕರು, ಮಾಜಿ ಶಾಸಕರು, ಮುಖಂಡರು ಯಾರೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಬಿ. ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಎಲ್ಲವೂ ಸರಿ ಹೋಗುತ್ತಿದೆ. ಅಸಮಾಧಾನಿತರ ಜೊತೆ ವಿಜಯೇಂದ್ರ ಅವರು ಮಾತುಕತೆ ನಡೆಸಿದ್ದು, ಹಾಗಾಗಿ, ಯಾರೂ ಹೋಗುವುದಿಲ್ಲ ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

    ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಛಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಗೆ ವಲಸೆ ಹೋಗುತ್ತಾರೆ ಎಂಬ ವದಂತಿ ಹಬ್ಬಿತ್ತು. ಆದ್ರೆ, ಈಗ ಎಲ್ಲವೂ ಶಮನವಾಗಿಲ್ಲ. ನನಗೂ ಪಕ್ಷದ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಅಸಮಾಧಾನ ಇತ್ತು. ಹಾಗೆಂದ ಮಾತ್ರಕ್ಕೆ ಬಿಜೆಪಿ ಬಿಡ್ತೀನಿ ಎನ್ನುವುದು ಸರಿಯಲ್ಲ. ನಾನು ಸಹ ಎಲ್ಲಿಯೂ ಕಾಂಗ್ರೆಸ್ ಗೆ ಹೋಗುತ್ತೀನಿ ಎಂದು ಹೇಳಿಲ್ಲ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪರ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸಬೇಕು ಹಾಗೂ ಬಿ. ವೈ. ವಿಜಯೇಂದ್ರ ರಾಜ್ಯ ಘಟಕದ ಅಧ್ಯಕ್ಷರಾಗಬೇಕು ಎಂಬ ಅಪೇಕ್ಷೆ ಇತ್ತು. ಅದು ಈಡೇರಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 28 ಕ್ಷೇತ್ರಗಳಲ್ಲಿಯೂ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    https://ainlivenews.com/wp-content/uploads/2023/12/WhatsApp-Video-2023-12-02-at-4.17.39-PM.mp4

    ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಮಾಜಿ ಸಚಿವ ವಿ. ಸೋಮಣ್ಣರು ದೆಹಲಿಗೆ ಹೋಗಿ ಪಕ್ಷದ ವರಿಷ್ಠರ ಭೇಟಿ ವಿಚಾರ ಕುರಿತಂತೆ ಕಾದು ನೋಡೋಣ. ಈ ಬಗ್ಗೆ ಹೆಚ್ಚು ಈಗಲೇ ಏನನ್ನೂ ಮಾತನಾಡಲ್ಲ. ಪಕ್ಷದೊಳಗಿನ ಅಸಮಾಧಾನ ಸರಿ ಹೋಗುತ್ತಿದೆ. ಯತ್ನಾಳ್ ಹಾಗೂ ಸೋಮಣ್ಣರ ಕುರಿತಂತೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದರು.

    ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್ ಘಡದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ತೆಲಂಗಾಣದಲ್ಲಿ ಪ್ರಬಲ ಪೈಪೋಟಿಯನ್ನು ಬಿಜೆಪಿ ನೀಡಲಿದೆ ಎಂಬ ವಿಶ್ವಾಸ ಇದೆ. ತೆಲಂಗಾಣದಲ್ಲಿ ಬಿಜೆಪಿ ಬಲಿಷ್ಠವಾಗಿಲ್ಲ. ಪಂಚರಾಜ್ಯಗಳ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಜಾತಿಗಣತಿಗೆ ನಮ್ಮ ವಿರೋಧ ಇಲ್ಲ. ಆದ್ರೆ, ವೈಜ್ಞಾನಿಕವಾಗಿ ಇರಬೇಕು ಎಂಬುದು ಅಷ್ಟೇ ಒತ್ತಾಯ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ, ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ತೀವ್ರ ವಿರೋಧ ಮಾಡಿದ್ದಾರೆ. ಆದರೂ ಜಾತಿಗಣತಿ ವರದಿ ಜಾರಿ ಮಾಡುತ್ತೇವೆ ಎನ್ನುವುದು ಸರಿಯಲ್ಲ. ಕಾಂತರಾಜ ಆಯೋಗದ ವರದಿಯು ವೈಜ್ಞಾನಿಕವಾಗಿಲ್ಲ. ಮನೆ ಮನೆಗೆ ತೆರಳಿ ಜಾತಿ ಗಣತಿ ಮಾಡಿಲ್ಲ. ನಮಗೆ ಈ ವಿಚಾರವೇ ಗೊತ್ತಿಲ್ಲ ಎಂದು ರೇಣುಕಾಚಾರ್ಯ ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ಸುಡುವ ಸಾಂಬಾರು ಬಿದ್ದು ಆಸ್ಪತ್ರೆ ಸೇರಿದ್ದ ಮಗು ಚಿಕಿತ್ಸೆ ಫಲಿಸದೇ ಸಾವು!

    June 20, 2025

    ಬಾಗಿನ ಅರ್ಪಿಸಲು ಹೋದಾಗ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆ!

    June 20, 2025

    ಸಿಕ್ಕ ಸಿಕ್ಕ ಲಿಂಕ್​ ಕ್ಲಿಕ್​ ಮಾಡುವರು ಈ ಸುದ್ದಿ ಮಿಸ್ ಮಾಡ್ದೆ ನೋಡಿ: ಸೈಬರ್ ವಂಚಕರಿದ್ದಾರೆ ಹುಷಾರ್!

    June 20, 2025

    ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ: ಸುದೀಪ್‌ ಹೆಸರು ಹೇಳಿ ಯುವ ನಟನಿಗೆ 22 ಲಕ್ಷ ವಂಚನೆ!

    June 20, 2025

    ಮಡಿಕೇರಿ: ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಗೆ ಕಾರು ಡಿಕ್ಕಿ; ಸವಾರ ಗಂಭೀರ!

    June 20, 2025

    Yatnal: ರಾಜ್ಯದಲ್ಲಿ ಸಾಬ್ರೂ ಬಿಟ್ರೇ ಬೇರೆ ಯಾರು ಇಲ್ವಾ?: ಯತ್ನಾಳ್ ಪ್ರಶ್ನೆ!

    June 20, 2025

    ಹುಬ್ಬಳ್ಳಿಯಲ್ಲಿ ದಾರುಣ ಘಟನೆ: ಸಾಂಬಾರು ಮೈಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು!

    June 20, 2025

    ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆಯನ್ನು BJP ನಾಯಕರು ಕಳೆದುಕೊಂಡಿದ್ದಾರೆ: ಯತ್ನಾಳ್

    June 20, 2025

    ಸಿದ್ದಾಪುರ: ಮರದಿಂದ ಕೆಳಗೆ ಬಿದ್ದು ವ್ಯಕ್ತಿ ದುರ್ಮರಣ..!

    June 20, 2025

    ಬಿಆರ್ ಪಾಟೀಲ್ ಆಡಿಯೋ ಲೀಕ್ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು..?

    June 20, 2025

    ಲಂಚ ಪ್ರಕರಣ: ನಿವೃತ್ತಿಯಾದ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು, ದೂರುದಾರ ಮೃತಪಟ್ಟು 5 ವರ್ಷ, ಇದು ರಾಜ್ಯದ ವಿಚಿತ್ರ ಪ್ರಕರಣ

    June 20, 2025

    ನಾನು ಬಾಯಿ ಬಿಟ್ರೆ ಸರ್ಕಾರ ಅಲ್ಲಾಡುತ್ತೆ..! ತಮ್ಮದೇ ಸರ್ಕಾರದ ವಿರುದ್ಧ BR ಪಾಟೀಲ್ ಆಕ್ರೋಶ

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.