Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಧಾರವಾಹಿಯಲ್ಲಿ ದೈವಾರಾಧನೆ ದೃಶ್ಯ ಚಿತ್ರೀಕರಣ: ಸ್ಪಷ್ಟನೆ ನೀಡಿದ ನಿರ್ದೇಶಕ ಪ್ರೀತಮ್ ಶೆಟ್ಟಿ

    By Author AINFebruary 11, 2024
    Share
    Facebook Twitter LinkedIn Pinterest Email
    Demo

    ಕಾಂತಾರ ಸಿನಿಮಾದ ಬಳಿಕ ತುಳು ನಾಡಿನ ದೈವಾರಾಧನೆ ಕುರಿತು ಸಾಕಷ್ಟು ಸುದ್ದಿಯಾಗಿದೆ. ಆದರೆ ಇದೀಗ ‘ಕಾವೇರಿ ಕನ್ನಡ ಮೀಡಿಯಂ’ ಧಾರಾವಾಹಿಯಲ್ಲಿ ದೈವಾರಾಧನೆ ದೃಶ್ಯಗಳನ್ನು ಪ್ರದರ್ಶಿಸಿರುವ ವಿಚಾರವಾಗಿ ಮಂಗಳೂರು, ಪಂಜೇಶ್ವರಗಳಲ್ಲಿ ಕೆಲವರು ಧಾರಾವಾಹಿ ವಿರುದ್ಧ ದೂರು ನೀಡಿದ್ದಾರೆ.

    ದೈವಾರಾಧನೆಯನ್ನು ಹಣ ಮಾಡುವ ದಂಧೆಯಾಗಿ ಬಳಸಿಕೊಳ್ಳಲಾಗುತ್ತಿದೆ. ಧಾರಾವಾಹಿ, ಸಿನಿಮಾಗಳಲ್ಲಿ ತಮ್ಮ ಆಚರಣೆಗಳ ಅನುಕರಣೆ ಮಾಡುತ್ತಿರುವುದು ತುಳು ನಾಡಿನ ಜನತೆಯ ಭಾವನೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ದೈವದ ದೃಶ್ಯಗಳನ್ನು ಧಾರಾವಾಹಿಯಿಂದ ತೆಗೆದುಹಾಕಬೇಕು, ದೈವಾರಾಧಕರ ಭಾವನೆಗೆ ಧಕ್ಕೆ ತಂದಿರುವ ಧಾರಾವಾಹಿಯ ತಂಡದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗಿದೆ.

    ‘ಕಾವೇರಿ ಕನ್ನಡ ಮೀಡಿಯಂ’ ಧಾರಾವಾಹಿಯನ್ನು ಪ್ರೀತಮ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ. ದೈವಾರಾಧನೆಯ ದೃಶ್ಯವನ್ನು ಚಿತ್ರೀಕರಿಸಿರುವುದರ ಕುರಿತು ಪ್ರತಿಕ್ರಿಯಿಸಿರುವ ನಿರ್ದೇಶಕ ಪ್ರೀತಮ್ ಶೆಟ್ಟಿ, ‘2019 ಪಿಂಗಾರ ಸಿನಿಮಾನ ನಿರ್ದೆಶನ ಮಾಡಿದ್ದೇ ಅದು ಕಂಪ್ಲೀಟ್ ಆಗಿ ದೈವಾರಾಧನೆ ಬಗ್ಗೆಯೇ ಮಾಡಿದ ಸಿನಿಮವಾಗಿತ್ತು. ಆ ಚಿತ್ರಕ್ಕೆ ನ್ಯಾಷನಲ್ ಅವಾರ್ಡ್ ಜೊತೆ ಸಾಕಷ್ಟು ಪ್ರಶಸ್ತಿಗಳನ್ನ ಪಡೆದಿದ್ದೇನೆ. 2016 ರಲ್ಲಿ ಮೀನಾಕ್ಷಿ ಮದುವೆ ಎಂಬ ಧಾರಾವಾಹಿಯಲ್ಲೂ ದೇವರಾಧನೆ ತೋರಿಸಿದ್ದೇ, ಅದ್ರೆ ಅವಾಗ ಯಾವುದೇ ರೀತಿ ಸಮಸ್ಯೆ ಆಗಿರಲಿಲ್ಲ , ನಾನು ಮಂಗಳೂರಿನವನೇ ನಮ್ಮ ಮನೆಯಲ್ಲೂ ದೇವರಾಧನೆ ಇದೇ, ಈಗ ನಾವು ಆಚಾರ ವಿಚಾರ ಗಮನದಲ್ಲಿಟ್ಟುಕೊಂಡೇ ದೃಶ್ಯವನ್ನು ಚಿತ್ರೀಕರಿಸಿರುವುದು ಎಂದಿದ್ದಾರೆ.

    ‘ಪ್ರಶಾಂತ್ ಮೊದಲೇ ಹೇಳಿದ್ದರು. ಒಂದು ವಾರ ನಾನ್ ವೆಜ್ ಸೇವಿಸಬಾರದು ಶೂಟಿಂಗ್ ನಲ್ಲಿ ಯಾರು ಚಪ್ಪಲಿ ಹಾಕಬಾರದು ಅಂತ ನಾವೆಲ್ಲು ಅಪಹಾಸ್ಯ ಮಾಡಿಲ್ಲ.  ಧಾರವಾಹಿಯಲ್ಲಿ ನಾಯಕಿ ಕೊರಗಜ್ಜನ‌ಭಕ್ತೆ ಮೊದಲಿನಿಂದಲೂ ಹೀಗಾಗಿ ಕಷ್ಟ ಬಂದಾಗ ದೈವ ಯಾವ ರೀತಿ ಪರಿಹಾರ ನೀಡುತ್ತೆ ಎಂಬುದನ್ನು ಒಳ್ಳೆ ರೀತಿಯಲ್ಲಿ ನಾವು ತೋರಿಸಿದ್ದೇವೆ ಎಲ್ಲೂ ಅಪಹಾಸ್ಯ ಮಾಡಿಲ್ಲ’ ಎಂದು ಹೇಳಿದ್ದಾರೆ.

    ಧಾರಾವಾಹಿಯಲ್ಲಿನ ದೈವಾರಾಧನೆ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಮಾಡಲಾಗಿರುವ ಒತ್ತಾಯದ ಬಗ್ಗೆ ಮಾತನಾಡಿರುವ ಪ್ರೀತಮ್ ಶೆಟ್ಟಿ, ‘ಸೋಮವಾರ ಧಾರವಾಹಿಯ ಎಪಿಸೋಡ್ ಪ್ರಸಾರ ಮಾಡುವ ಬಗ್ಗೆ ಮುಖ್ಯಸ್ಥರೆಲ್ಲ ಸೇರಿ ನಿರ್ಧಾರ ತೆಗೆದುಕೊಳ್ಳಬೇಕು. ಧಾರಾವಾಹಿ ಪ್ರದರ್ಶನ ಮಾಡದೇ ಇರೋ ಬಗ್ಗೆ ಈಗಾಲೇ ನಾನು ಏನೂ ಹೇಳೋದಕ್ಕೆ ಆಗಲ್ಲ. ಆದರೆ ಇನ್ನು ಮುಂದೆ ನಾನು ಈ ರೀತಿಯ ದೈವರಾಧನೆ ದೃಶ್ಯಗಳನ್ನು ಮಾಡುವುದಿಲ್ಲ’ ಎಂದು ಧಾರವಾಹಿ ನಿರ್ದೇಶಕ ಪ್ರೀತಮ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಮದುವೆಯಾಗದೇ ತಾಯಿಯಾದ್ರು ಕನ್ನಡದ ಖ್ಯಾತ ನಟಿ..ಯಾರವರು?

    July 4, 2025

    200 ಕೋಟಿ ವಂಚನೆ ಕೇಸ್: ದೆಹಲಿ ಹೈಕೋರ್ಟ್’ನಿಂದ ಜಾಕ್ವಲಿನ್ ಅರ್ಜಿ ವಜಾ!

    July 4, 2025

    ಬೆಳ್ಳಂಬೆಳಗ್ಗೆ ಕುಟುಂಬಸ್ಥರೊಟ್ಟಿಗೆ ನಾಡದೇವತೆ ಚಾಮುಂಡಿ ʼದರ್ಶನʼ ಪಡೆದ ಡಿಬಾಸ್!‌

    July 4, 2025

    ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .

    July 3, 2025

    TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್‌ನ ಮೊದಲ ಹೆಜ್ಜೆ !

    July 2, 2025

    ಗೋಲ್ಡನ್‌ ಸ್ಟಾರ್‌ ಗಣೇಶ್‌ ಜೊತೆ ಕೈ ಜೋಡಿಸಿದ ಜೇಮ್ಸ್‌ ಡೈರೆಕ್ಟರ್‌ ಚೇತನ್‌ ಕುಮಾರ್‌..ಹೊಸ ಸಿನಿಮಾ ಅನೌನ್ಸ್!

    July 2, 2025

    ಯಶ್-ರಾಧಿಕಾ ರೋಮ್ಯಾಂಟಿಕ್‌ Photo..ಪತ್ನಿಯನ್ನು ಎತ್ತಿಕೊಂಡು ಮುದ್ದಾಡಿದ ರಾಕಿಭಾಯ್!‌

    July 2, 2025

    ಧೀರೇನ್‌ ರಾಮ್‌ ಕುಮಾರ್‌ ನಟಿಸುತ್ತಿರುವ ʼಪಬ್ಬಾರ್‌ʼ ಸಿನಿಮಾದ ಫಸ್ಟ್‌ ಶೆಡ್ಯುಲ್ಡ್‌ ಕಂಪ್ಲೀಟ್‌

    July 2, 2025

    ಬ್ಯಾಂಗಲ್ ಬಂಗಾರಿ ಹಾಡಿಗೆ 10 ಮಿಲಿಯನ್ ವೀವ್ಸ್…ದಾಖಲೆ ಬರೆದ ಯುವರಾಜ್ ಕುಮಾರ್ ಎಕ್ಕ ಸಿನಿಮಾ ಹಾಡು

    July 2, 2025

    ಹುಟ್ಟುಹಬ್ಬದ ದಿನದಂದೆ ಹೊಸ ಅವತಾರವೆತ್ತ ಗೋಲ್ಡನ್‌ ಸ್ಟಾರ್‌ ಗಣೇಶ್…ಭಜರಂಗಿ ಗೆಟಪ್‌ನಲ್ಲಿ ಮಳೆ ಹುಡ್ಗ ದರ್ಶನ!

    July 2, 2025

    ವಿಜಯ್‌ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್…!

    July 2, 2025

    ಆಷಾಢ ಮಾಸ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ!

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.