ಇಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನ. ಈ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸಲಾಗುತ್ತದೆ. ಮನಜಪಥ ವಿಶ್ವಪಥ ಸಂದೇಶವನ್ನು ಸಾರಿದ ಶ್ರೇಷ್ಠ ವಿಶ್ವ ಮಾನವ ಕುವೆಂಪು ಬಗ್ಗೆ ಹೆಚ್ಚಿನ ಮಾಹಿತಿ ಪಡೆಯೋಣ.
BBK11: ಮೋಸದಾಟ ರಿವೀಲ್: ತಪ್ಪಾಯ್ತು ಎಂದು ಕಿಚ್ಚನ ಮುಂದೆ ಭವ್ಯಾಗೌಡ ಕಣ್ಣೀರು!
ಜಯ ಭಾರತ ಜನನಿಯ ತನುಜಾತೆ’, ‘ಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು’, ‘ಓ ನನ್ನ ಚೇತನ ಆಗುವ ನೀ ಅನಿಕೇತನ’ ಹೀಗೆ ರಾಷ್ಟ್ರಕವಿ ಕುವೆಂಪು ಅವರ ಹಲವಾರು ಕವನಗಳು ಕನ್ನಡಿಗರ ಮನದಾಳದಲ್ಲಿ ಹಾಸುಹೊಕ್ಕಾಗಿದೆ.
ರಾಷ್ಟ್ರಕವಿ ಕುವೆಂಪು ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ 1904 ಡಿಸೆಂಬರ್ 29 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ಪೂರೈಸಿ ಪ್ರೌಢಶಾಲಾ ಶಿಕ್ಷಣದಿಂದ ಹಿಡಿದು ಎಂಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು. ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕಾದಂಬರಿಕಾರ ನಾಟಕಕಾರ, ವಿಮರ್ಷಕ ಮತ್ತು ಚಿಂತಕ, ಇಪ್ಪತ್ತನೆಯ ಶತಮಾನದಲ್ಲಿ ಕಂಡ ದೈತ್ಯ ಪ್ರತಿಭೆ.
ಕುವೆಂಪು ಅವರು 20ನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ ‘ಶ್ರೀ ರಾಮಾಯಣ ದರ್ಶನಂ’ನಲ್ಲಿ ಈ ಕಾಲಕ್ಕೆ ಅಗತ್ಯವಾದ ಸಂದೇಶವನ್ನು ನೀಡಿದ್ದಾರೆ.
ಕುವೆಂಪುರವರ ಪ್ರಮುಖ ಎರಡು ಕಾದಂಬರಿಗಳಾದ ‘ಕಾನೂರು ಹೆಗ್ಗಡತಿ’ ಹಾಗೂ ‘ಮಲೆಗಳಲ್ಲಿ ಮದುಮಗಳು’ ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ.
ಬಾರಿಸು ಕನ್ನಡ ಡಿಂಡಿಮವ ಎನ್ನುವ ಮೂಲಕ ಕನ್ನಡಕ್ಕೆ ಅದ್ಭುತವಾದ ಹಾಡನ್ನು ಕೊಟ್ಟು ಜೈ ಭಾರತ ಜನನಿಯ ಎಂಬ ಅರ್ಥ ಪೂರ್ಣವಾದ ನಾಡಗೀತೆಯಾಗಿ ನೀಡಿದ ವಿಶ್ವಮಾನವ ಕವಿ.
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ.
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.
ಕುಪ್ಪಳಿಯು ಶಿವಮೊಗ್ಗದಿಂದ 80 ಕಿ.ಮೀ ದೂರದಲ್ಲಿದೆ ಹಾಗೂ ತೀರ್ಥಹಳ್ಳಿಯಿಂದ 10 ಕಿ.ಮೀ ದೂರದಲ್ಲಿದೆ. ಕುವೆಂಪು ರಾಷ್ಟೀಯ ಪ್ರತಿಷ್ಠಾನ ಇವರ ಮನೆಯನ್ನು ಕವಿಮನೆ ಹೆಸರಿನ ಮ್ಯೂಸಿಯಂ ಮಾಡಿದ್ದಾರೆ. ಮನೆಯ ಮೂಲ ಸ್ವರೂಪವನ್ನು ಕಾಯ್ದುಕೊಂಡು ನವೀಕರಿಸಿ ಮ್ಯೂಸಿಯಮ್ ಆಗಿ ಪರಿವರ್ತಿಸಿಲಾಗಿದೆ.