Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರೈತರಿಗೆ ಗುಡ್ ನ್ಯೂಸ್.. ಮಿನಿ ಪವರ್ ಟಿಲ್ಲರ್ ಖರೀದಿಗೆ ಸರ್ಕಾರ ನೀಡುತ್ತಿದೆ ಶೇ.90ರಷ್ಟು ಸಹಾಯಧನ.! ಇಂದೇ ಅರ್ಜಿ ಸಲ್ಲಿಸಿ‌

    By Author AINJanuary 6, 2025
    Share
    Facebook Twitter LinkedIn Pinterest Email
    Demo

    ರೈತರ ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆಯಾದರೂ, ಮಾಹಿತಿಯ ಕೊರತೆಯಿಂದಾಗಿ ರೈತರಿಗೆ ಯೋಜನೆಗಳ ಸೌಲಭ್ಯಗಳು ಸಿಗುತ್ತಿಲ್ಲ. ಕೃಷಿಯಲ್ಲಿ ಆಧುನಿಕತೆ ತರಲು ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ, ಬೀಜ, ಗೊಬ್ಬರ, ಖರೀದಿಗೆ ಪ್ರೋತ್ಸಾಹಧನ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ.

    ಶೇ.90ರಷ್ಟು ಸಹಾಯಧನ
    ಕೃಷಿ ಯಾಂತ್ರೀಕರಣ ಯೋಜನೆಯಡಿ ರೈತರಿಗೆ ಶೇ.90ರಷ್ಟು ಸಹಾಯಧನ ಸಿಗುತ್ತದೆ. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯಿಂದ ಲಭ್ಯತೆ ಆಧಾರದ ಮೇಲೆ ಕೃಷಿ. ಯಂತ್ರೋಪಕರಣಗಳನ್ನು ರೈತರಿಗೆ ನೀಡಲಾಗುವುದು. ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್ , ಟ್ರ್ಯಾಕ್ಟರ್ ಚಾಲಿತ ಎಂ.ಬಿ.ಪ್ಲೋ, ರೋಟೋವೇಟರ್,ರೋಟೋವೇಟರ್,ಡಿಸ್ಕ್ ಫ್ಲೋ, ಡಿಸ್ಕ್ ಹ್ಯಾರೋ ಸೇರಿದಂತೆ ಇನ್ನಿತರ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಸಿಗಲಿದೆ.

    ಸಹಾಯಧನ ಪಡೆಯಲು ಅಗತ್ಯ ದಾಖಲೆಗಳು?

    • ರೈತರ ಜಮೀನಿನ ಪಹಣಿ
    • ಆಧಾರ್ ಕಾರ್ಡ್‌
    • ಬ್ಯಾಂಕ್ ಪಾಸ್ ಬುಕ್
    • ಪಹಣಿ ಜಂಟಿಯಾಗಿದ್ದರೆ ಒಪ್ಪಿಗೆ ಪ್ರಮಾಣ ಪತ್ರ ಕಡ್ಡಾಯವಾಗಿ ಬೇಕು.
    • ರೈತರು ಫ್ರೂಟ್ಸ್ ಐಡಿ ಹೊಂದಿರಬೇಕು.
    • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು.
    • ರೈತರು ಯಾವ ಕೃಷಿ ಯಂತ್ರೋಪಕರಣಕ್ಕೆ ಅರ್ಜಿ ಸಲ್ಲಿಸುತ್ತಾರೋ ಆ ಅರ್ಜಿ ಹೊಂದಿರಬೇಕು.

    ಯಾವ ಕೃಷಿ ಯಂತ್ರೋಪಕರಣಕ್ಕೆ ಎಸ್ಟು ಸಹಾಯಧನ?

    ಮಿನಿ ಟ್ರ್ಯಾಕ್ಟರ್: ಮಿನಿ ಟ್ರ್ಯಾಕ್ಟರ್‌ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಹಾಯಧನ ಸಿಗಲಿದೆ. ಸಾಮಾನ್ಯ ವರ್ಗದವರಿಗೆ 75 ಸಾವಿರ ರೂಪಾಯಿಯವರೆಗೆ ಸಹಾಯಧನ ಸಿಗಲಿದೆ.

    ಪವರ್ ಟಿಲ್ಲರ್ : ಖರೀದಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ಗರಿಷ್ಠ 72500 ರೂಪಾಯಿವರೆಗೆ ಸಹಾಯಧನ ಸಿಗಲಿದೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90ರಷ್ಟು ಸಹಾಯಧನ, ಗರಿಷ್ಠ 1 ಲಕ್ಷ ರೂಪಾಯಿಯವರೆಗೆ ಸಹಾಯಧನ ಸಿಗಲಿದೆ.

    ಟ್ರ್ಯಾಕ್ಟರ್ ಚಾಲಿತ ಎಂ.ಬಿ. ಫ್ಲೋ ಫಿಕ್ಸ್ಡ್‌: ಸಾಮಾನ್ಯ ವರ್ಗದವರಿಗೆ 14100 ರೂಪಾಯಿ ರಿವರ್ಸಿಬಲ್ ಎಂ.ಬಿ. ಫ್ಲೋ ಗೆ 25,800 ರೂಪಾಯಿ ಸಹಾಯಧನ ಸಿಗಲಿದೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಎಂ.ಬಿ. ಫ್ಲೋ 25830 ರೂಪಾಯಿ, ರಿವರ್ಸಿಬಲ್ ಎಂ.ಬಿ. ಫ್ಲೋ ಗೆ 51,300 ರೂಪಾಯಿ ಸಹಾಯಧನ ಸಿಗಲಿದೆ.

    ಟ್ರ್ಯಾಕ್ಟರ್ ಚಾಲಿತ ಡಿಸ್ಕ್ ಫ್ಲೋ: ಖರೀದಿಗೆ ಸಾಮಾನ್ಯ ವರ್ಗದವರಿಗೆ 29000ದಿಂದ 36500 ರೂಪಾಯಿಯವರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 52200 ರೂಪಾಯಿಯಿಂದ 65700 ರೂಪಾಯಿಯವರೆಗೆ ಸಹಾಯಧನ ಸಿಗಲಿದೆ.
    ಟ್ರ್ಯಾಕ್ಟರ್ ಚಾಲಿತ ಡಿಸ್ಕ್ ಹ್ಯಾರೋ: ಸಾಮಾನ್ಯ ವರ್ಗದವರಿಗೆ 29000-35000 ರೂಪಾಯಿಯವರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 52,200 ದಿಂದ 63000 ರೂಪಾಯಿವರೆಗೆ ಸಹಾಯಧನ ಸಿಗಲಿದೆ.

    ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಲಭ್ಯತೆ ಆಧಾರದ ಮೇರೆಗೆ ನೀಡಲಾಗುವುದು. ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಲಭ್ಯತೆ ಆಧಾರದ ಮೇಲೆ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ನೀಡಲಾಗುವುದು. ಇಲ್ಲಿ ಹಿರಿತನಕ್ಕೆ ಅಂದರೆ ಲಭ್ಯತೆ ಆಧಾರದ ಮೇಲೆ ಅರ್ಜಿ ಮೊದಲು ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು.

     

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ಪಹಲ್ಗಾಮ್‌ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.