Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಲೂನ್ ಮಾರಿದರು, ಊರು ಬಿಟ್ರೂ, ತಾಳಿ ಕೊಟ್ರೂ: ಅಬ್ಬಬ್ಬಾ ಫೈನಾನ್ಸ್ ಚಲ್ಲಾಟಕ್ಕೆ ಬಡವರು ಕಂಗಾಲು!

    By AIN AuthorJanuary 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ಹೆಚ್ಚಾಗಿದ್ದು, ಸಾಲ ವಾಪಸು ಮಾಡಲು ವಿಳಂಬವಾದರೆ ಅವುಗಳು ನೀಡುವ ಕಿರುಕುಳದಿಂದ ಜನರು ಆತ್ಮಹತ್ಯೆ ಮಾಡಿಕೊಳ್ಳುವುದು, ಮನೆ ಬಿಟ್ಟು ಪರಾರಿಯಾಗುವಂಥ ಘಟನೆಗಳು ನಡೆಯುತ್ತಿವೆ. ಕುಟುಂಬಗಳನ್ನು ಬೀದಿಗೆ ತಳ್ಳುವಂಥ ಘಟನೆಗಳು ವ್ಯಾಪಕವಾಗಿವೆ.

    ಬಾಯಿ ವಾಸನೆ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!

    ಒಂದು ತಿಂಗಳು ಕಂತು ಕಟ್ಟುವುದು ತಪ್ಪಿದರೂ ಮನೆ ಬಳಿ ಬಂದು ಟಾರ್ಚರ್ ಕೊಡುತ್ತಿದ್ದಾರೆ. ಹೀಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಟಾರ್ಚರ್ ತಾಳಲಾರದೇ ರಾಜ್ಯದಲ್ಲಿ ಈವರೆಗೂ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ, ರಾಯಚೂರು, ಬೆಳಗಾವಿಯಲ್ಲಿ ಒಬ್ಬೊಬ್ಬರು ಸಾವಿಗೆ ಶರಣಾಗಿದ್ದಾರೆ. ಕೆಲವೆಡೆ ಸಾಲ ಕೊಟ್ಟವರ ಕಾಟ ತಡೆಯಲಾಗದೇ ಮನೆಗೆ ಬೀಗ ಹಾಕಿಕೊಂಡು ಊರು ತೊರೆದಿದ್ದಾರೆ.

    ದೌರ್ಜನ್ಯದ ಬಗ್ಗೆ ನೋಡೋದಾದ್ರೆ:

    ಹಾವೇರಿ ಜಿಲ್ಲೆಯ ಹಾನಗಲ್‌ನ ಕೊಪ್ಪರಸಿಕೊಪ್ಪದಲ್ಲಿ ಮೈಕ್ರೋಫೈನಾನ್ಸ್‌ ಸಿಬ್ಬಂದಿ ಕಿರುಕುಳ ತಡೆಯಲಾಗದೇ ಸಾವಿತ್ರಮ್ಮ ಎಂಬ ಮಹಿಳೆ ಊರನ್ನೇ ತೊರೆದಿದ್ದಾಳೆ. ಇವರು ತಮ್ಮ ನೆಂಟರಿಗಾಗಿ ಮೈಕ್ರೋ ಫೈನಾನ್ಸ್​ನಿಂದ ಸಾಲ ಮಾಡಿಕೊಟ್ಟಿದ್ದರು. ಆದರೆ ಅವರು, ಸರಿಯಾಗಿ ಕಟ್ಟದ ಹಿನ್ನೆಲೆಯಲ್ಲಿ ಫೈನಾನ್ಸ್​ ಸಂಸ್ಥೆಯ ಸಿಬ್ಬಂದಿ ಮನಗೆ ಬಂದು ಕಿರುಕುಳ ನೀಡಲು ಶುರುಮಾಡಿದ್ದಾರೆ. ಇದರಿಂದ ನೊಂದು ಊರನ್ನೇ ಬಿಟ್ಟಿದ್ದಾರೆ.

    ಸಲೂನ್ ಮಾರಿ ಊರು ತೊರೆದ ಕ್ಷೌರಿಕ: ತಂದೆ ಮಗ ಎನ್.ಟಿ. ರಸ್ತೆಯಲ್ಲಿ 2 ವರ್ಷದ ಹಿಂದೆ ಮಾಸ್ಟರ್ ಕಟ್ ಸಲೂನ್ ಹೆಸರಿನ ಅಂಗಡಿ ತೆರೆದಿದ್ದರು. ಅಂಗಡಿಗೆ ಸ್ವಲ್ಪ ಸಾಲ ಮಾಡಿಕೊಂಡಿದ್ದ ಮಗ ಶ್ರೀನಿವಾಸ್ ಸಾಲ ತೀರಿಸಲು ಬಳಿ ಸಾಲ ಮಾಡಿದ್ದ ಬಳಿಕ ದಿನ ದುಡಿದರೂ ಬಡ್ಡಿ ಕಟ್ಟಲಾಗದೆ ಬಡ್ಡಿ ಮಾಫಿಯಾದ ಕಿರುಕುಳಕ್ಕೆ ಒಳಗಾಗಿದ್ದ. ಇತ್ತೀಚೆಗೆ ಫೈನಾನ್ಸ್ ಸಿಬ್ಬಂದಿ ಸಾಲ ಕಟ್ಟುವಂತೆ ಒತ್ತಡ ಹಾಕುತ್ತಿದ್ದರು. ಫೈನಾನ್ಸ್ ಅವರ ಕಿರುಕುಳಕ್ಕೆ ಬೆದರಿ 6 ತಿಂಗಳ ಹಿಂದೆ ತನ್ನ ಅಂಗಡಿಯನ್ನು ಬೇರೆಯವರಿಗೆ ಮಾರಾಟ ಮಾಡಿ ಪತ್ನಿ, ಮಕ್ಕಳು, ವಯೋವೃದ್ಧ ತಂದೆ- ತಾಯಿಯನ್ನು ತೊರೆದು ಊರು ಬಿಟ್ಟಿದ್ದಾನೆ. ಮಗ ಮಾರಿದ ಸಲೂನ್‌ನಲ್ಲಿ ಅಪ್ಪ ಕೆಲಸ ಮಾಡಬೇಕಾದ ಪರಿಸ್ಥಿತಿ ಬಂದಿದೆ.

    ಬಾಣಂತಿ, ಹಸುಗೂಸು ಹೊರಹಾಕಿ ದೌರ್ಜನ್ಯ.. ಸಾಲ ವಸೂಲಾತಿಗೆ ಬಂದ ಖಾಸಗಿ ಫೈನಾನ್ಸ್ ಸಿಬ್ಬಂದಿ 1 ತಿಂಗಳ ಹಸುಗೂಸನ್ನು ಲೆಕ್ಕಿಸದೇ ಮನೆಯಿಂದ ಎಲ್ಲರನ್ನೂ ಹೊರಗೆ ಹಾಕಿ ಮನೆ ಜಪ್ತಿ ಮಾಡಿದ ಅಮಾನವೀಯ ಘಟನೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ತಾರಿಹಾಳದಲ್ಲಿ ನಡೆದಿದೆ. ಪೊಲೀಸ್ ಭದ್ರತೆಯಲ್ಲಿ ಆಗಮಿಸಿದ ಫೈನಾನ್ಸ್ ಸಿಬ್ಬಂದಿ, ಮನೆಯಲ್ಲಿದ್ದ ಎಲ್ಲ ಸದಸ್ಯರನ್ನು ಹೊರಹಾಕಿದರು. ತಾರಿಹಾಳದ ಗಣಪತಿ ರಾಮಚಂದ್ರ ಲೋಹಾರ ಎಂಬುವರ ಮನೆಯನ್ನು ಜಪ್ತಿ ಮಾಡಲಾಗಿದೆ. 5 ವರ್ಷಗಳ ಹಿಂದೆ ಮನೆ ಕಟ್ಟಿಸಲು ಖಾಸಗಿ ಫೈನಾನ್ಸ್​ನಿಂದ 25 ಲಕ್ಷ ಸಾಲ ಪಡೆದಿದರು. 3 ವರ್ಷ ಸರಿಯಾಗಿ ಕಂತನ್ನು ಕಟ್ಟಿದರು. ತಾಯಿಗೆ ಅನಾರೋಗ್ಯ ಮತ್ತು ಮಗಳ ಹೆರಿಗೆಯಾದ ಹಿನ್ನೆಲೆಯಲ್ಲಿ 6 ತಿಂಗಳಿಂದ ಸಾಲದ ಕಂತು ಮರುಪಾವತಿಸಲು ಸಾಧ್ಯವಾಗಿರಲಿಲ್ಲ.

    ಯಾದಗಿರಿಯಲ್ಲಿ ಸಾಲ ಪಡೆದಿದ್ದ ಯುವಕನ ಮೇಲೆ ಮೀಟರ್‌ಬಡ್ಡಿ ದಂಧೆಕೋರನಿಂದ ದಾಳಿ ಮಾಡಿದ್ದಾರೆ. ದಾಳಿಯ ತೀವ್ರತೆಗೆ ಖಾಸಿಂ ಎಂಬ ಯುವಕ ಜೀವ ಕಳೆದುಕೊಂಡಿದ್ದಾನೆ. ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.

    ತಾಳಿ ಹಿಡಿದು ಪ್ರತಿಭಟನೆ: ಬೆಳಗಾವಿಯಲ್ಲಿ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಎದುರು ತಾಳಿ ಹಿಡಿದು ಮಹಿಳೆಯರಿಂದ ಪ್ರತಿಭಟನೆ. ಕ್ರಮಕ್ಕೆ ಆಗ್ರಹಿಸಿದ್ದಾರೆ.

    ಅರಿಶಿಣದ ಕೊಂಬು: ಮೈಕ್ರೋ ಫೈನಾನ್ಸ್ ಕಾಟಕ್ಕೆ ಬೇಸತ್ತು ಸಿಎಂ ಸಿದ್ದರಾಮಯ್ಯಗೆ ಮಾಂಗಲ್ಯ ಪೋಸ್ಟ್ ಮಾಡಿದ್ದ ರಾಣೆಬೆನ್ನೂರಿನ ಶೈಲಾ ಎಂಬುವರು ಕೊರಳಲ್ಲಿ ತಾಳಿ ಬದಲು ಅರಿಶಿಣ ಕೊಂಬು ಕಟ್ಟಿಕೊಂಡಿದ್ದಾರೆ.

    ಅದಿರಲಿ, ಒಂದೇ ತಿಂಗಳು ಕಂತು ಕಟ್ಟುವುದು ತಪ್ಪಿದರಊ, ಜನರ ಮೇಲೆ ದರ್ಪ ತೋರುತ್ತಿರುವುದು ನಿಜಕ್ಕೂ ದುರಂತ.

    Demo
    Share. Facebook Twitter LinkedIn Email WhatsApp

    Related Posts

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಬಡವರು ಹಣ ಕೊಟ್ಟು ಮನೆ ತೆಗೆದುಕೊಳ್ಳುವ ದುಸ್ಥಿತಿ ನಿರ್ಮಾಣ ಆಗಿದೆ: ಬಿ.ಎಸ್. ಯಡಿಯೂರಪ್ಪ

    June 20, 2025

    ಬೆಂಗಳೂರಿನಲ್ಲಿ ಘೋರ ದುರಂತ: ಹೈಟೆನ್ಷನ್ ವೈರ್ ಸ್ಪರ್ಶಿಸಿ 10 ವರ್ಷದ ಬಾಲಕ ಸಾವು..!

    June 20, 2025

    BR ಪಾಟೀಲ್ ಆಡಿಯೋ ವೈರಲ್ ವಿಚಾರ: ಸಿಎಂ ಸಿದ್ದರಾಮಯ್ಯ ಬಣ್ಣ ಬಯಲು – ಪರಿಷತ್ ಶಾಸಕ ಟಿ.ಎ.ಶರವಣ ಆಕ್ರೋಶ

    June 20, 2025

    ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

    June 20, 2025

    ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ- ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿಎಂ ಸಿದ್ದರಾಮಯ್ಯ

    June 20, 2025

    ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬ: ಶುಭಾಶಯ ಕೋರಿದ ಪರಿಷತ್ ಶಾಸಕ ಟಿ ಎ ಶರವಣ

    June 20, 2025

    ಕಿಚ್ಚ ಸುದೀಪ್‌ ಹೆಸರಲ್ಲಿ ಪಂಗನಾಮ..ಯುವನಟನಿಗೆ ನಂದಕಿಶೋರ್‌ ದೋಖಾ…?

    June 20, 2025

    ಮದುವೆಯಾಗದೆ 100 ಮಕ್ಕಳ ತಂದೆಯಾದ ಟೆಲಿಗ್ರಾಂ CEO.! ಕರುಳ ಕುಡಿಗಳಿಗೆ 20 ಬಿಲಿಯನ್ ಡಾಲರ್ ದೇಣಿಗೆ

    June 20, 2025

    ಕೊನೆಗೂ ಬಯಲಾಯ್ತು ವರ್ಷಗಳಿಂದ ನಿಗೂಢವಾಗಿದ್ದ ನಿತ್ಯಾನಂದನ ಕೈಲಾಸ ಸ್ಥಳ..!

    June 20, 2025

    ದಿನದ ಕೆಲಸದ ಅವಧಿಯನ್ನು 10 ತಾಸಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ: ಸಚಿವ ಸಂತೋಷ್ ಲಾಡ್

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.