Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರಿಗರಿಗೆ ಆತಂಕ: ಈ ಭಾಗದ ಆಸ್ತಿದಾರರಿಗೆ ಆಸ್ತಿಯನ್ನೇ ಕಳೆದುಕೊಳ್ಳುವ ಚಿಂತೆ!

    By AIN AuthorFebruary 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಬಿಗ್‌ ಶಾಕ್‌ ಕೊಟ್ಟಿದೆ.

    ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಐವರು ನೇಪಾಳಿ ಪ್ರಜೆಗಳು ಸಾವು!

    ಬಿಬಿಎಂಪಿಯ ಎಲ್ಲಾ 8 ವಲಯಗಳಲ್ಲಿ 608 ಆಸ್ತಿಗಳಿಂದ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದವರ ಆಸ್ತಿಗಳ ಮಾರಾಟಕ್ಕೆ ಪಾಲಿಕೆ ಮುಂದಾಗಿದೆ.

    ಈ ಬಗ್ಗೆ ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಮಾಹಿತಿ ನೀಡಿದ್ದಾರೆ. ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರವಾಗಿ ಕಾರಣ ಕೇಳಿ ನೋಟಿಸ್, ಬೇಡಿಕೆ ನೋಟಿಸ್‌, ಆಸ್ತಿಗಳ ಮುಟ್ಟೊಗೋಲು, ವಸತಿಯೇತರ ಆಸ್ತಿಗಳಿಗೆ ಬೀಗಮುದ್ರೆ ಸೇರಿದಂತೆ ಇನ್ನಿತರೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಸಹ ಸಾಕಷ್ಟು ಆಸ್ತಿ ಮಾಲೀಕರು ದೀರ್ಘಕಾಲದಿಂದ ಪಾಲಿಕೆಗೆ ಆಸ್ತಿ ತೆರಿಗೆ ಪಾವತಿಸುತ್ತಿಲ್ಲ. ಈ ಸಂಬಂಧ ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡುವ ಸಲುವಾಗಿ ಆಸ್ತಿ ತೆರಿಗೆ ಪಾವತಿಸದ ಭಾರೀ ಬಾಕಿ ಉಳಿಸಿಕೊಂಡ ಆಸ್ತಿದಾರರ ಸ್ಥಿರ ಆಸ್ತಿಗಳನ್ನು ತುರ್ತು ಮಾರಾಟ ಮಾಡಲು ಹರಾಜು ಪ್ರಕ್ರಿಯೆಯನ್ನು ಆರಂಭಿಸಲಾಗುತ್ತಿದೆ ಎಂದು ಬಿಬಿಎಂಪಿಯು ಹೇಳಿದೆ.

    ಪೂರ್ವ ವಲಯ
    ಪಶ್ಚಿಮ ವಲಯ
    ದಕ್ಷಿಣ ವಲಯ
    ಮಹದೇವಪುರ ವಲಯ
    ಬೊಮ್ಮನಹಳ್ಳಿ ವಲಯ
    ಯಲಹಂಕ ವಲಯ
    ಆರ್.ಆರ್ ನಗರ ವಲಯ
    ದಾಸರಹಳ್ಳಿ ವಲಯ
    ಕಂಗಾಲಾದ ಆಸ್ತಿದಾರರು

    ಪೂರ್ವ ವಲಯ: ಪೂರ್ವ ವಲಯದಲ್ಲಿ ಬರುವ ಜೆ.ಸಿ ನಗರ, ಮಾರುತಿ ಸೇವಾನಗರ, ಹೆಚ್.ಬಿ.ಆರ್ ಲೇಔಟ್, ಜೀವನ್ ಭೀಮಾನಗರ, ಸಿ.ವಿ ರಾಮನ್ ನಗರ, ಶಾಂತಿನಗರ ವಸಂತನಗರ ಉಪ ವಿಭಾಗಗಳಲ್ಲಿ ತಲಾ 10, ಹೆಬ್ಬಾಳ, ಕೆ.ಜಿ ಹಳ್ಳಿ ಉಪ ವಿಭಾಗಗಳಲ್ಲಿ ತಲಾ 11, ಪುಲೇಶಿನಗರ, ದೊಮ್ಮಲೂರು ಉಪ ವಿಭಾಗಗಳಲ್ಲಿ ತಲಾ 9 ಹಾಗೂ ಶಿವಾಜಿನಗರ ಉಪ ವಿಭಾಗದಲ್ಲಿ 8 ಸೇರಿದಂತೆ ಒಟ್ಟು 118 ಆಸ್ತಿಗಳನ್ನು 13ನೇ ಫೆಬ್ರವರಿ 2025 ರಂದು ಹರಾಜು ಮಾಡಲಾಗುತ್ತದೆ.

    ಪಶ್ಚಿಮ ವಲಯ: ಪಶ್ಚಿಮ ವಲಯದಲ್ಲಿ ಬರುವ ಚಿಕ್ಕಪೇಟೆ, ಚಂದ್ರ ಲೇಔಟ್, ಚಾಮರಾಜಪೇಟೆ, ಗಾಂಧಿ ನಗರ, ಗೋವಿಂದರಾಜಪುರ, ಜೆ.ಜೆ.ಆರ್ ನಗರ, ಮಲ್ಲೇಶ್ವರ, ಮಹಾಲಕ್ಷ್ಮಿಪುರ, ಮತ್ತಿಕೆರೆ, ನಾಗಪುರ, ರಾಜಾಜಿನಗರ ಹಾಗೂ ಶ್ರೀರಾಮಮಂದಿರ ಉಪವಿಭಾಗಳಲ್ಲಿ ತಲಾ 10 ಆಸ್ತಿಗಳಂತೆ ಒಟ್ಟು 120 ಆಸ್ತಿಗಳನ್ನು 13ನೇ ಫೆಬ್ರವರಿ 2025 ರಂದು ಹರಾಜು ಮಾಡಲಾಗುತ್ತದೆ.

    ದಕ್ಷಿಣ ವಲಯ: ದಕ್ಷಿಣ ವಲಯದಲ್ಲಿ ಬರುವ ಬಿಟಿಎಂ ಲೇಔಟ್, ಕೋರಮಂಗಲ, ಬನಶಂಕರಿ, ಪದ್ಮನಾಭನಗರ, ಜಯನಗರ, ಜೆ.ಪಿ ನಗರ, ಗಾಳಿ ಆಂಜನೇಯ ದೇವಸ್ಥಾನ, ವಿಜಯನಗರ, ಹೊಂಬೇಗೌಡ ನಗರ ಉಪವಿಭಾಗಳಲ್ಲಿ ತಲಾ 10, ಗಿರಿನಗರ ಉಪ ವಿಭಾಗದಲ್ಲಿ 8, ಬಸವನಗುಡಿ ಉಪ ವಿಭಾಗದಲ್ಲಿ 6 ಹಾಗೂ ಕೆಂಪೇಗೌಡ ನಗರ ಉಪ ವಿಭಾಗದಲ್ಲಿ 5 ಸೇರಿದಂತೆ ಒಟ್ಟು 109 ಆಸ್ತಿಗಳನ್ನು 13ನೇ ಫೆಬ್ರವರಿ 2025 ರಂದು ಹರಾಜು ಮಾಡಲಾಗುತ್ತದೆ.

    ಮಹದೇವಪುರ ವಲಯ: ಮಹದೇವಪುರ ವಲಯದಲ್ಲಿ ಬರುವ ಹೊರಮಾವು, ಹೆಚ್.ಎ.ಎಲ್, ಕೆ.ಆರ್ ಪುರ, ಮಾರತಹಳ್ಳಿ, ಹೂಡಿ ಹಾಗೂ ವೈಟ್ ಫೀಲ್ಡ್ ಸೇರಿದಂತೆ ಉಪವಿಭಾಗಳಲ್ಲಿ ತಲಾ 10 ಆಸ್ತಿಗಳಂತೆ ಒಟ್ಟು 60 ಆಸ್ತಿಗಳನ್ನು 13ನೇ ಫೆಬ್ರವರಿ 2025 ರಂದು ಹರಾಜು ಮಾಡಲಾಗುತ್ತದೆ

    ಬೊಮ್ಮನಹಳ್ಳಿ ವಲಯ: ಬೊಮ್ಮನಹಳ್ಳಿ ವಲಯದಲ್ಲಿ ಬರುವ ಬೇಗೂರು, ಉತ್ತರ ಹಳ್ಳಿ, ಯಲಚೇನಹಳ್ಳಿ, ಬೊಮ್ಮನಹಳ್ಳಿ, ಅರಕೆರೆ, ಹೆಚ್.ಎಸ್.ಆರ್ ಲೇಔಟ್ ಹಾಗೂ ಅಂಜನಾಪುರ ಉಪವಿಭಾಗಳಲ್ಲಿ ತಲಾ 10 ಆಸ್ತಿಗಳಂತೆ ಒಟ್ಟು 70 ಆಸ್ತಿಗಳನ್ನು 14ನೇ ಫೆಬ್ರವರಿ 2025 ರಂದು ಹರಾಜು ಮಾಡಲಾಗುತ್ತದೆ.

    ಯಲಹಂಕ ವಲಯ: ಯಲಹಂಕ ವಲಯದಲ್ಲಿ ಬರುವ ಯಲಹಂಕ, ಯಲಹಂಕ ಸ್ಯಾಟಲೈಟ್ ಟೌನ್, ಬ್ಯಾಟರಾಯನಪುರ ಹಾಗು ವಿದ್ಯಾರಣ್ಯಪುರ ಉಪ ವಿಭಾಗಳಲ್ಲಿ ತಲಾ 10 ಆಸ್ತಿಗಳಂತೆ ಒಟ್ಟು 40 ಆಸ್ತಿಗಳನ್ನು 13ನೇ ಫೆಬ್ರವರಿ 2025 ರಂದು ಹರಾಜು ಮಾಡಲಾಗುತ್ತದೆ.

    ಆರ್.ಆರ್ ನಗರ ವಲಯ: ಆರ್.ಆರ್ ನಗರ ವಲಯದಲ್ಲಿ ಬರುವ ಲಗ್ಗೆರೆ, ಆರ್.ಆರ್ ನಗರ, ಲಕ್ಷ್ಮಿದೇವಿನಗರ, ಯಶವಂತಪುರ ಉಪವಿಭಾಗಳಲ್ಲಿ ತಲಾ 10, ಕೆಂಗೇರಿ ಹಾಗೂ ಹೇರೋಹಳ್ಳಿ ಉಪ ವಿಭಾಗಗಳಲ್ಲಿ ತಲಾ 5 ಸೇರಿದಂತೆ ಒಟ್ಟು 50 ಆಸ್ತಿಗಳನ್ನು 10ನೇ ಫೆಬ್ರವರಿ 2025 ರಂದು ಹರಾಜು ಹಾಕಲಾಗುತ್ತದೆ.

    ದಾಸರಹಳ್ಳಿ ವಲಯ: ದಾಸರಹಳ್ಳಿ ವಲಯದಲ್ಲಿ ಬರುವ ಶೆಟ್ಟಿಹಳ್ಳಿ, ದಾಸರಹಳ್ಳಿ, ಪೀಣ್ಯ ಉಪವಿಭಾಗಳಲ್ಲಿ ತಲಾ 10 ಹಾಗೂ ಹೆಗ್ಗನಹಳ್ಳಿ ಉಪ ವಿಭಾಗದಲ್ಲಿ 11 ಸೇರಿದಂತೆ ಒಟ್ಟು 41 ಆಸ್ತಿಗಳನ್ನು 13ನೇ ಫೆಬ್ರವರಿ 2025 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಮೂಲಕ ಬಿಬಿಏಂಪಿಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಶಾಕ್‌ ನೀಡಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    ರಸ್ತೆ ಬದಿಯ ಮರಗಳ ಸುತ್ತ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ ತೆರವಿಗೆ ಆದೇಶ: ಪ್ರೀತಿ ಗೆಹ್ಲೋಟ್!

    June 19, 2025

    ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಬಮೂಲ್ ನೂತನ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿಕೆ !

    June 19, 2025

    Bengaluru Airport: ಲಗೇಜ್ ವಿಚಾರಕ್ಕೆ ವಿಮಾನದಲ್ಲಿ ಮಹಿಳೆಯ ಕಿರಿಕ್..! ವಿಡಿಯೋ ವೈರಲ್

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಡಿ.ಕೆ. ಸುರೇಶ್

    June 19, 2025

    ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ. ಶಿವಕುಮಾರ್

    June 19, 2025

    ಮುಸ್ಲಿಂ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ

    June 19, 2025

    Nandini ತನ್ನ ಕಡೆ ತಪ್ಪು ಇಟ್ಕೊಂಡು Amul ಮೇಲೆ ಆರೋಪ ಮಾಡೋದು ಸರಿ ಅಲ್ಲ: ಭೀಮಾ ನಾಯಕ್

    June 19, 2025

    Gruhalakshmi Scheme: ಗೃಹಲಕ್ಷ್ಮಿ ಹಣ ನಿಮಗೆ ಬಂದಿಲ್ಲವೇ..? ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು..?

    June 19, 2025

    Chicken Health Care: ಚಿಕನ್ ತಿಂದ್ರೆ ಬರುತ್ತಾ ಕ್ಯಾನ್ಸರ್? ಈ ಬಗ್ಗೆ ವೈದ್ಯರು ಹೇಳೋದೇನು..?

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.