ತುಮಕೂರು: ನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ವರದಿಯಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಮೂರು ವರ್ಷದ ಮಗುವನ್ನು ಕೊಲೆ ಮಾಡಿ ಹಾವು ಕಚ್ಚಿ ಸಾವನ್ನಪ್ಪಿದೆ ಎಂದು ನಾಟಕವಾಡಿದ್ದ 24 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿದ್ದಾರೆ. ಮಿಥುನ್ಗೌಡ (4) ಕೊಲೆಯಾದ ಮಗುವಾಗಿದ್ದು, ಚಾಮರಾಜನಗರ ಮೂಲದ ಚಂದ್ರಶೇಖರ್ ಮತ್ತು ಕಾವ್ಯಾ ತುಮಕೂರು ತಾಲೂಕಿನ ಸಿದ್ಧಲಿಂಗಯ್ಯನಪಾಳ್ಯದಲ್ಲಿ ನೆಲೆಸಿದ್ದರು..
ಕಾವ್ಯ ಮಂಡ್ಯ ಜಿಲ್ಲೆ, ಬೆಳ್ಳೂರು ಕ್ರಾಸ್ ಮೂಲದವಳಾಗಿದ್ದು, ಕಾವ್ಯಾಗೆ ಈಗಾಗಲೇ ಅಶೋಕ ಎಂಬುವರ ಜತೆ ಮದುವೆಯಾಗಿತ್ತು. ಪ್ರೆಗ್ನೆಂಟ್ ಇದ್ದಾಗಲೇ ಚಂದ್ರಶೇಖರ್ ಜೊತೆ ಓಡಿ ಬಂದಿದ್ದ ಕಾವ್ಯ, ಬಳಿಕ ಮಿಥುನ್ ಗೌಡಗೆ ಜನ್ಮ ನೀಡಿದ್ದಳು. ನಂತರ ಮಗುವಿನ ವಿಚಾರವಾಗಿ ಈ ಜೋಡಿ ಮಧ್ಯೆ ಜಗಳವಾಗುತ್ತಿತ್ತು. ಮಗುವಿನ ವಿಷಯವಾಗಿ ಇಬ್ಬರ ನಡುವೆ ಕಲಹ ನಡೆಯುತ್ತಿತ್ತು ಎನ್ನಲಾಗಿದೆ.
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ಮಾರ್ಚ್ 20ರಂದು, ಕಾವ್ಯ ಕೆಲಸಕ್ಕೆ ಹೋದ ಸಮಯದಲ್ಲಿ ಚಂದ್ರಶೇಖರ್ ಮಗುವಿಗೆ (ಮಿಥುನ್ ಗೌಡ) ಹಲ್ಲೆ ನಡೆಸಿದ್ದ. ಇದರಿಂದ, ತೀವ್ರ ಗಾಯಗೊಂಡ ಮಿಥುನ್ ಪ್ರಜ್ಞೆ ತಪ್ಪಿಬಿದ್ದಿದ್ದ. ಇದನ್ನು ಮುಚ್ಚಿಹಾಕಲು, ಮಗುವಿಗೆ ಹಾವು ಕಚ್ಚಿದೆ ಎಂದು ಸುಳ್ಳು ಹೇಳಿ ಸ್ಥಳೀಯರನ್ನು ನಂಬಿಸಲು ಪ್ರಯತ್ನಿಸಿದ್ದ. ತಕ್ಷಣವೇ ಗ್ರಾಮಸ್ಥರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಿಥುನ್ನನ್ನು ಊರ್ಡಿಗೆರೆ ಕ್ಲಿನಿಕ್ಗೆ ಕರೆದೊಯ್ದಿದ್ದರು. ಆದರೆ, ವೈದ್ಯರು ಪರೀಕ್ಷೆ ನಡೆಸಿದಾಗ ಮಿಥುನ್ ಮೃತಪಟ್ಟಿರುವುದು ದೃಢಪಟ್ಟಿತ್ತು.
ಮಿಥುನ್ ಗೌಡ ಅಂತ್ಯಕ್ರಿಯೆಗೆ ಮುನ್ನ, ಸ್ಥಳೀಯರಾದ ಎಸ್ಆರ್ ಗಂಗಾಧರಯ್ಯ ಎಂಬುವರು ಮೃತದೇಹದ ಫೋಟೊ ತೆಗೆದಿದ್ದರು. ಮಾರ್ಚ್ 22ರಂದು ಮತ್ತೆ ಈ ಚಿತ್ರವನ್ನು ವೀಕ್ಷಿಸಿದಾಗ, ಸಾವಿನ ಬಗ್ಗೆ ಅನುಮಾನ ಮೂಡಿತ್ತು. ಈ ಬಗ್ಗೆ ಗ್ರಾಮದ ಜನರು ಸೇರಿ ಚಂದ್ರಶೇಖರ್ನನ್ನು ಪ್ರಶ್ನಿಸಿದ್ದಾರೆ. ಆಗ, ಕೊಲೆಯ ಬಗ್ಗೆ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ.
ಈ ಘಟನೆ ಸಂಬಂಧ ಗಂಗಾಧರಯ್ಯ ಪೊಲೀಸರಿಗೆ ದೂರು ನೀಡಿದ್ದರು, ಪ್ರಕರಣವನ್ನು ದಾಖಲಿಸಿಕೊಂಡ ಮಹಿಳಾ ಪೊಲೀಸ್ ಠಾಣೆ ಅಧಿಕಾರಿಗಳು ಚಂದ್ರಶೇಖರ್ನನ್ನು ಬಂಧಿಸಿದ್ದಾರೆ. ತಕ್ಷಣವೇ ಮಗುವಿನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಿಸಲಾಗಿದೆ.