ಬಳ್ಳಾರಿ:- ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶ್ರೀನಿವಾಸ್ ಕ್ಯಾಂಪ್ ಬಳಿ ಎಲ್ಎಲ್ಸಿ ಕಾಲುವೆಯಲ್ಲಿ ಕಾಲು ಜಾರಿಬಿದ್ದು ಓರ್ವ ಬಾಲಕ ಮೃತಪಟ್ಟಿದ್ದು, ಇಬ್ಬರು ಮಕ್ಕಳನ್ನ ರಕ್ಷಣೆ ಮಾಡಿರುವ ಘಟನೆ ಜರುಗಿದೆ.
ವಿಕ್ರಂ ಮೃತ ಬಾಲಕ. ವಿಪರೀತ ಬಿಸಿಲಿನ ಪರಿಣಾಮ ವಿಕ್ರಂ, ಶಂಭುಲಿಂಗ ಹಾಗೂ ದೀಪು ಎಂಬ ಮೂವರು ಯುವಕರು ಸ್ನಾನಕ್ಕೆಂದು ಎಲ್ಎಲ್ಸಿ ಕಾಲುವೆಗೆ ತೆರಳಿದ್ದರು. ಕಾಲುವೆಗೆ ಇಳಿಯುವಾಗ ಮೂವರೂ ಬಾಲಕರು ಕಾಲು ಜಾರಿ ಬಿದ್ದಿದ್ದರು.
ವಿಕ್ರಂ ಮೃತದೇಹಕ್ಕಾಗಿ ಅಗ್ನಿಶಾಮಕದಳ ಸಿಬ್ಬಂದಿಯಿಂದ ಶೋಧಕಾರ್ಯ ಮುಂದುವರಿದಿದೆ.