ಶುಕ್ರವಾರ ಚೆನ್ನೈ ನಲ್ಲಿ ನಡೆದ IPL ಪಂದ್ಯದಲ್ಲಿ ತವರಲ್ಲೇ ಚೆನ್ನೈ ತಂಡವನ್ನು ಭಾರೀ ಅಂತರದಲ್ಲಿ ಮಣಿಸುವಲ್ಲಿ RCB ಯಶಸ್ವಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಉದ್ಯಮಿ ವಿಜಯ್ ಮಲ್ಯಾ ಅಭಿನಂದನೆ ಸಲ್ಲಿಸಿದ್ದಾರೆ.
ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ: 3 ದಿನ ಬೆಟ್ಟಕ್ಕೆ ವಾಹನ ನಿಷೇಧ!
X ಮಾಡಿರುವ ಅವರು, 18 ವರ್ಷಗಳ ನಂತರ ಚೆಪಾಕ್ ಕೋಟೆಯಲ್ಲಿ ದಕ್ಷಿಣದ ಎದುರಾಳಿ ಸಿಎಸ್ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಕ್ಕಾಗಿ ಆರ್ಸಿಬಿಗೆ ಅಭಿನಂದನೆಗಳು. ಬ್ಯಾಟಿಂಗ್ ಮತ್ತು ಬೌಲ್ನಲ್ಲಿ ಅತ್ಯುತ್ತಮ ಆಲ್ರೌಂಡ್ ಪ್ರದರ್ಶನ. ಧೈರ್ಯಶಾಲಿ ಹುಡುಗರೇ, ಇನ್ನೂ ಚೆನ್ನಾಗಿ ಆಟವಾಡಿ ಎಂದು ಶುಭಾಶಯ ತಿಳಿಸಿದ್ದಾರೆ.
ಐಪಿಎಲ್ನ ಹೈವೋಲ್ಟೇಜ್ ಪಂದ್ಯದಲ್ಲಿ ಕೊನೆಗೂ 17 ವರ್ಷಗಳ ಬಳಿಕ ಚೆನ್ನೈ ನೆಲದಲ್ಲಿ ಆರ್ಸಿಬಿ ಗೆದ್ದು ಬೀಗಿದೆ. ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 50 ರನ್ಗಳ ಭರ್ಜರಿ ಜಯ ಸಾಧಿಸಿದೆ.