ಹುಬ್ಬಳ್ಳಿ:- ಹಾಲು ಮತ್ತು ವಿದ್ಯುತ್ ದರ ಏರಿಕೆ ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಎರಡು ತಿಂಗಳ ಅಂತರದಲ್ಲಿ ಎರಡು ಬಾರಿ ದರ ಏರಿಕೆ ಮಾಡಲಾಗಿದ್ದು, ಈ ವಿಚಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.
IPL 2025: CSK ವಿರುದ್ಧ ಗೆದ್ದ ಬೆನ್ನಲ್ಲೇ ಚೆನ್ನೈ ಗೆ ಟಾಂಗ್ ಕೊಟ್ಟ RCB ಕ್ಯಾಪ್ಟನ್!
ನಗಯ ದಾಜೀಬಾನ್ ಪೇಟೆ ಸರ್ಕಲ್ ಬಳಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ಹಾಲು, ವಿದ್ಯುತ್ ದರ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆ ಆಗುತ್ತದೆ. ಇದೊಂದು ಜನವಿರೋಧಿ ಸರ್ಕಾರ ಎಂದು ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಕೂಡಲೇ ದರ ಏರಿಕೆ ವಾಪಾಸು ಪಡೆಯಲು ಆಗ್ರಹ ಮಾಡಿದ್ದಾರೆ. ಶಾಸಕ ಮಹೇಶ್ ಟೆಂಗಿನಕಾಯಿ, ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು.