ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ಸಿಎಂ ಆಪ್ತ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರನ್ನು ಭೇಟಿಯಾಗಿದ್ದಾರೆ. ಇತ್ತೀಚಿಗಷ್ಟೇ ದೆಹಲಿಗೆ ತೆರಳಿ HD ಕುಮಾರಸ್ವಾಮಿರವನ್ನು ಭೇಟಿಯಾಗಿದ್ದರು.
ಸಿದ್ದರಾಮಯ್ಯನವರ ಬಣದ ಆಪ್ತರೆಂದು ಗುರಿತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಅವರ ಭೇಟಿ ಅದರಲ್ಲೂ ದೆಹಲಿಯಿಂದ ವಾಪಸ್ಸಾದ ಬಳಿಕ ಪರಸ್ಪರ ಭೇಟಿಯಾಗಿರುವುದು ಚರ್ಚೆಗೆ ಕಾರಣವಾಗಿದೆ.
ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು ಹೀಗೆ ಮಾಡಿ: ಈ 4 ಸ್ಥಳಗಳಲ್ಲಿ ದೀಪ ಹಚ್ಚುವುದನ್ನು ಮರೆಯಬೇಡಿ..!
ಇನ್ನೂ ಬಗ್ಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ನಾನು ಮತ್ತು ಮಹದೇವಪ್ಪ 30 ವರ್ಷಗಳಿಂದಲೂ ಪರಸ್ಪರ ಭೇಟಿಯಾಗುತ್ತಲೇ ಇರುತ್ತೇವೆ. ಬಹಳಷ್ಟು ಸಚಿವರ ಜೊತೆಯೂ ಈ ರೀತಿ ಚರ್ಚೆಯಾಗುತ್ತಿರುತ್ತವೆ. ವಿಶೇಷತೆ ಇಲ್ಲ ಎಂದರು.
ಹನಿಟ್ರ್ಯಾಪ್ ಬಗ್ಗೆ ಸಚಿವ ರಾಜಣ್ಣ ನೀಡಿರುವ ದೂರಿನಲ್ಲಿ ಬೆಂಗಳೂರಿನ ಪ್ರಭಾವಿ ನಾಯಕರಿದ್ದಾರೆ ಎಂದು ಪ್ರಸ್ತಾಪಿಸಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಾರಕಿಹೊಳಿ ಯಾರ ಕೈವಾಡ ಎಂಬುದನ್ನು ಕಂಡುಹಿಡಿಯುವುದು ಪೊಲೀಸರ ಕರ್ತವ್ಯ. ನಾವು ಹೇಳಲು ಬರುವುದಿಲ್ಲ.
ರಾಜಣ್ಣ ಹೆಸರಿಸಿರುವಂತೆ ನಾಯಕರನ್ನು ಹುಡುಕಲು ಸಮಯ ಬೇಕಾಗುತ್ತದೆ. ದೇಶಾದ್ಯಂತ ಬಹಳಷ್ಟು ಮಂದಿಯಿದ್ದಾರೆ. ಬಹಳಷ್ಟು ಘಟನೆಗಳು ಕೂಡ ನಡೆದಿವೆ. ಇಂತವರೇ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.