ಬೆಂಗಳೂರು: ಶಾಲಾ ಕಾಲೇಜುಗಳಿಗೆ ಈಗಾಗಲೇ ದಾಖಲಾತಿ ಶುರುವಾಗಿವೆ. ಮಕ್ಕಳಿಗೆ ದಾಖಲಾತಿ ಕೊಡಿಸಲು ಪೋಷಕರು ಹಗಲಿರುಳು ಪರದಾಡುತ್ತಿದ್ದಾರೆ. ಆದ್ರೆ 1ನೇ ತರಗತಿಗೆ ಮಕ್ಕಳನ್ನ ದಾಖಲಾತಿ ಮಾಡಿಸೋಕೆ 6 ವರ್ಷ ಕಡ್ಡಾಯ ಅನ್ನೋ ರೂಲ್ಸ್ ಪೋಷಕರಿಗೆ ಹೊಸ ಟೆನ್ಸನ್ಸ್ ತಂದಿಟ್ಟಿದೆ. ಇನ್ನೂ ಈ ವಿಚಾರವಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ನಗರದಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಮಾಡಿದ ತಪ್ಪಿನಿಂದ ಈ ಗೊಂದಲ ಉಂಟಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಅವರು ಮಾರ್ಗಸೂಚಿಗಳನ್ನು ರೂಪಿಸಿದ್ದರು. ಆದರೆ ನಾವು ಅದನ್ನು ವಿರೋಧಿಸುತ್ತೇವೆ. ಹಾಗಾಗಿ ಈ ವಿಷಯವನ್ನು ಪರಿಶೀಲಿಸಲು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಮನವಿ ಕಳುಹಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ, ಎಸ್ಇಪಿ ಆಯೋಗದಿಂದ ಮಾರ್ಗಸೂಚಿಗಳನ್ನು ಪಡೆದ ಕೂಡಲೇ ಅದನ್ನು ಜಾರಿಗೆ ತರುವುದಾಗಿ ಅವರು ಹೇಳಿದ್ದಾರೆ.