ಬೆಂಗಳೂರಲ್ಲಿ ಪದೇ ಪದೇ ಈ ರೀತಿಯ ಕೊಲೆಗಳು ನಡೆಯುತ್ತಿದ್ದು, ಭಯಾನಕ ಘಟನೆಗೆ ಬೆಂಗಳೂರು ಜನರು ಬೆಚ್ಚಿಬಿದ್ದಿದ್ದಾರೆ. ಇದೀಗ ಮೊನ್ನೆಯಷ್ಟೆ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಮೃತದೇಹವನ್ನು ತುಂಡುತುಂಡು ಮಾಡಿ ಸೂಟ್ಕೇಸ್ನಲ್ಲಿಟ್ಟು ಪರಾರಿಯಾಗಿದ್ದ ಭಯಾನಕ ಘಟನೆ ಸದ್ಯ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆ ಕೊಲೆ ಪ್ರಕರಣಕ್ಕೆ ಸಂಬಂಧೀಸಿದಂತೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನಿನ್ನೆ ರಾತ್ರಿ ಆರೋಪಿಯನ್ನು ಬೆಂಗಳೂರಿಗೆ ಕರೆತಂದಿದ್ದ ಪೊಲೀಸರು ಇಂದು ಕೋರಮಂಗಲ ಎನ್ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದ್ದರು. ಬಳಿಕ ರಾಕೇಶ್ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದರು. ಸದ್ಯ ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯಲ್ಲಿ ಪತ್ನಿಯನ್ನು (ಗೌರಿ ಅನಿಲ್ ಸಾಂಬೆಕರ್) ಕೊಲೆ ಮಾಡಿ, ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿದ ಬಳಿಕ ಆರೋಪಿ ರಾಕೇಶ್ ಮಹಾರಾಷ್ಟ್ರಕ್ಕೆ ತೆರಳಿದ್ದ. ಗುರುವಾರ ಆತ ಮುಂಬೈಗೆ ಹೋಗುತ್ತಿದ್ದಾಗ ಶಿರ್ವಾಲ್ ಪೊಲೀಸ್ ಠಾಣೆ ಸಮೀಪದಲ್ಲಿ ಅಸ್ವಸ್ಥನಾಗಿ ಬಿದ್ದಿದ್ದ. ನಂತರ ಸ್ಥಳಕ್ಕೆ ಧಾವಿಸಿದ್ದ ಅಲ್ಲಿನ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲು ಮಾಡಿಸಿದ್ದರು.
ರಾಕೇಶ್ ಕೊಲೆ ಮಾಡಿದೀನಿ ಅಂತಾ ಗುರುವಾರ ಮಧ್ಯಾಹ್ನ ನನಗೆ ಕಾಲ್ ಮಾಡಿ ಹೇಳಿದ್ದ. ಅಲ್ಲದೇ ತಾನೂ ಕೂಡ ಆತ್ಮಹತ್ಯೆ ಮಾಡ್ಕೊಳ್ತಿದೀನಿ ಅಂತಾ ಹೇಳಿದ್ದ. ನಿನ್ನ ನಿರ್ಧಾರ ತುಂಬಾ ತೀವ್ರವಾಗಿದೆ ಅಂತಾ ನಾನು ಹೇಳಿದ್ದೆ. ಗೌರಿ ತಾಯಿ ಮತ್ತು ಮುಂಬೈನ ಮೆಗವಾಡಿ ಪೊಲೀಸರಿಗೆ ಘಟನೆ ಬಗ್ಗೆ ಕೂಡಲೇ ತಿಳಿಸಿದ್ದೆ. ನಂತರ ಶಿರವಾಲಾ ಪೊಲೀಸರು ಆತನನ್ನ ಪತ್ತೆ ಹಚ್ಚಿದರು ಎಂದರು.