ಬೆಂಗಳೂರು: ಯತ್ನಾಳ್ ಕಾಂಗ್ರೆಸ್ ಕಡೆ ಬರಲು ಸಾಧ್ಯವಿಲ್ಲ, ಜೆಡಿಎಸ್ ಕಡೆ ಹೋಗಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಕಡೆ ಬರಲು ಸಾಧ್ಯವಿಲ್ಲ.
ಅವರ ಸಿದ್ದಾಂತವೇ ಬೇರೆ ನಮ್ಮ ಸಿದ್ದಾಂತವೇ ಬೇರೆ. ಜೆಡಿಎಸ್ ಕಡೆ ಬೇಕಿದ್ದರೆ ಹೋಗಲು ಚರ್ಚೆ ಮಾಡಬಹುದು. ಇಲ್ಲಿ ಮುಖ್ಯವಾಗಿ ಯತ್ನಾಳ್ ಅವರಿಗೆ ಹೊಸ ಪಕ್ಷ ಕಟ್ಟಿದರೆ ಯಶಸ್ಸು ಸಿಗುತ್ತದೆ ಎಂದು ನನಗಂತೂ ಅನಿಸುವುದಿಲ್ಲ ಎಂದು ಹೇಳಿದರು.
Happy Ramadan Eid 2025: ರಂಜಾನ್ ಹಬ್ಬದ ಮಹತ್ವ, ಇತಿಹಾಸ ಆಚರಣೆಯ ವಿಧಾನ ಹೀಗಿದೆ ನೋಡಿ..!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗಿ ಬಹಳ ದಿನಗಳಾಗಿತ್ತು. ಕೇಂದ್ರದಲ್ಲಿ ವರಿಷ್ಟರನ್ನು ಭೇಟಿ ಮಾಡ್ತಾರೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಯವರನ್ನೂ ಕೂಡ ಸಿಎಂ ಭೇಟಿ ಮಾಡ್ತಾರೆ.
ಮುಡಾ ಪ್ರಕರಣ ಆದಮೇಲೆ ಆರೋಗ್ಯ ಸ್ವಲ್ಪ ಏರು ಪೇರಾಗಿ ಬಜೆಟ್ ಕೂಡ ಇದ್ದ ಕಾರಣದಿಂದ ದೆಹಲಿಗೆ ಸಿಎಂ ಹೋಗಿರಲಿಲ್ಲ. ಎಲ್ಲ ವಿಷಯಗಳನ್ನೂ ಚರ್ಚೆ ಮಾಡಿ ಬರ್ತಾರೆ. ಸಿಎಂ ದೆಹಲಿಯಿಂದ ಬಂದ ಮೇಲೆ ಮುಂದಿನ ಹೆಜ್ಜೆ ಏನು ಎಂಬುದು ಗೊತ್ತಾಗುತ್ತದೆ ಎಂದರು.