ಹುಬ್ಬಳ್ಳಿ: ರಂಜಾನ್ ಪ್ರಾರ್ಥನೆ ವೇಳೆ ಸಮಾಜದ ಸ್ವಾಸ್ತ್ಯ ಹದಗೆಡುವಂತೆ ಪ್ಲೇ ಕಾರ್ಡ್ ಪ್ರದರ್ಶಿಸಿದ್ದ ಪ್ರಕರಣ ಸಂಬಂಧ ಓರ್ವ ಎಸ್ಡಿಪಿಐ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಡಿಪಿಐ ಮುಖಂಡ ಅಬ್ದುಲ್ ಗಪ್ಪುರ್ ಕುರಹಟ್ಟಿ ಬಂಧಿತ ಆರೋಪಿ.
ನಿನ್ನೆ ರಂಜಾನ್ ಪ್ರಯುಕ್ತ ನಗರದ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ವೇಳೆ ಎಸ್ಡಿಪಿಐ ಕಾರ್ಯಕರ್ತರು ಸಂಘ ಪರಿವಾರಗಳ ವಿರುದ್ಧ ಪ್ಲೇ ಕಾರ್ಡ್ ತೋರಿಸಿದ್ದರು. ಇದು ಹಿಂದೂ ಸಂಘಟನೆಗಳ ಕಣ್ಣು ಕೆಂಪಾಗಿಸಿತ್ತು. ಇದೇ ವಿಚಾರವಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉಪನಗರ ಪೊಲೀಸ್ ಠಾಣೆಯಲ್ಲಿ ಎಸ್ಡಿಪಿಐ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಅಬ್ದುಲ್ ಗಪ್ಪುರ್ ಕುರಹಟ್ಟಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಎಫ್ಐಆರ್ ದಾಖಲಾಗುತ್ತಿದ್ದಂತೆ ಅಬ್ದುಲ್ ಗಪ್ಪುರ್ನನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ.
ರಂಜಾನ್ ವೇಳೆ ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ: ಸಂಘ ಪರಿವಾರದ ವಿರುದ್ಧ ವಿವಾದಿತ ಪೋಸ್ಟರ್ ಪ್ರದರ್ಶನ!
ಪೊಲೀಸರು ಅಬ್ದುಲ್ ಗಪ್ಪುರ್ ಮೊಬೈಲ್ ಫೋನ್ ಸಹ ವಶಕ್ಕೆ ಪಡೆದಿದ್ದಾರೆ. ಆರೋಪಿಗೆ ಕೋರ್ಟ್ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.