ಚಾಮರಾಜನಗರ : ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯು ನಡೆಯಿತು.
ನಗರದ ಕೆ.ಡಿ.ಪಿ. ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಸದ್ಯದಲ್ಲಿಯೇ ಮುಂಗಾರು ಮಳೆ ಆರಂಭವಾಗುವ ಹಿನ್ನೆಲೆ ಕೃಷಿ ಚಟುವಟಿಕೆ ಬಗ್ಗೆ ಮಾಹಿತಿ ಪಡೆದರು. ರೈತರಿಗೆ ಕೃಷಿ ಚಟುವಟಿಕೆಗೆ ಅಗತ್ಯವಾಗಿರುವ ರಸಗೊಬ್ಬರ ಬಿತ್ತನೆ ಬೀಜದ ಕೊರತೆಯಾಗದಂತೆ ಕ್ರಮವಹಿಸುವಂತೆ ಸಂಬಂಧಿಸಿದ ಕೃಷಿ ಹಾಗೂ ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಲಿನ ದರ ಹೆಚ್ಚಳಮಾಡಿದ್ದು ರೈತರಿಗೆ ಏರಿಕೆಯ ಅಷ್ಟೂ ದರವನ್ನು ನೀಡಲಾಗುತ್ತದೆ ಎಂದು ಸಭೆಯಲ್ಲಿ ಸಚಿವರು ಮಾಹಿತಿ ನೀಡಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆ ಶಿಶು ಮತ್ತು ಮಕ್ಕಳ ಅಭಿವೃದ್ದಿ ಇಲಾಕೆ, ನೀರಾವರಿ ಇಲಾಖೆ ಅರಣ್ಯ ಇಲಾಖೆ ಸೇರಿದಂತೆ ಇಲಾಖಾವಾರು ಮಾಹಿತಿ ಪಡೆದು ಸರ್ಕಾರದ ಅನುಧಾನದ ಸದ್ಬಳಕೆ ಕ್ಷಿಪ್ರ ರೀತಿಯಲ್ಲಿ ನಡೆಯುವಂತೆ ಸೂಚನೆ ನೀಡಿದ್ರು.
ಕುಡಿದು ಕಿರುಕುಳ ಕೊಡುತ್ತಿದ್ದ ತಂದೆಯನ್ನೇ ಕೊಂದು ಅಪಘಾತವೆಂದು ಬಿಂಬಿಸಿದ್ದ ಮಗ
ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ , ಎಸ್ಪಿ ಕವಿತಾ, ಶಾಸಕರುಗಳಾದ ಎ.ಆರ್.ಕೃಷ್ಣಮೂರ್ತಿ, ಗಣೇಶಪ್ರಸಾದ್, ತಿಮ್ಮಯ್ಯ , ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ , ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಹೊಂಗನೂರು ಚಂದ್ರು, ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದರು.