ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಜೀರ್ಣ ಆಗುವಷ್ಟು ಬಹುಮತವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಾಗ ತುಘಲಕ್ ದರ್ಬಾರ್ ನಡೆಸಿ ಸಾಮಾನ್ಯ ಜನ ಜೀವಿಸಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣ ಮಾಡಿದ್ದು ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದು ಕಿಡಿಕಾರಿದ್ದಾರೆ.
ಉಳಿದ ಹಿಂದೂಗಳು ಏನು ದ್ರೋಹ ಮಾಡಿದ್ದಾರೆ? ಅಂತ ಮುಸಲ್ಮಾನರಿಗೆ 4% ಮೀಸಲಾತಿ ಕೊಟ್ಟಿದ್ದಾರೆ. ನಾವು ಮುಸ್ಲಿಮರ ವಿರೋಧಿಗಳಲ್ಲ, ಆದರೆ ಎಲ್ಲರನ್ನೂ ಸರಿ ಸಮನಾಗಿ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು. ಹಾಲು, ವಿದ್ಯುತ್, ಮೆಟ್ರೋ, ನೋಂದಣಿ ವೆಚ್ಚ ಸೇರಿ ಎಲ್ಲಾ ದರ ಏರಿಕೆ ಮಾಡಿದ್ದಾರೆ.
ಒಂದು ಮುತ್ತಿಗೆ 50 ಸಾವಿರ: ಹಣ ವಾಪಸ್ ಕೇಳಿದ್ದಕ್ಕೆ ಹನಿಟ್ರ್ಯಾಪ್ ಬೆದರಿಕೆ, ಶಿಕ್ಷಕಿ ಸೇರಿ ಮೂವರು ಅರೆಸ್ಟ್!
ದಿನಬಳಕೆಯ ವಸ್ತುಗಳನ್ನು ಕಾಂಗ್ರೆಸ್ ಸರ್ಕಾರ ಏರಿಸಿ ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ, ಆದ್ದರಿಂದ ಬೆಲೆ ಏರಿಕೆ ಹಿಂಪಡೆಯಬೇಕು ಅಂತಾ ನಾವು ನಾಳೆ ಅಹೋ ರಾತ್ರಿ ಧರಣಿ ಮಾಡುತ್ತಿದ್ದೇವೆ. ನಾನೂ ಕೂಡಾ ಧರಣಿಯಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.
ಇನ್ನೂ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಅವರಿಗೆ ಮುಖ್ಯಮಂತ್ರಿ ಯಾರಾಗಬೇಕು ಎಂಬುದೇ ಮುಖ್ಯವಾಗಿದೆ. ನಮ್ಮ ಹೋರಾಟ ಇನ್ನೂ ಅನೇಕ ದಿನ ನಡೆಯುವುದಿದೆ. ಜೆಡಿಎಸ್ ನವರು ಅವರದ್ದೇ ಆದ ಬೇರೆ ಕಾರಣಕ್ಕೋಸ್ಕರ ಹೋರಾಟದಲ್ಲಿ ಭಾಗವಹಿಸುತ್ತಿಲ್ಲ ಎಂದರು.