ಉಡುಪಿ: ಕರ್ನಾಟಕದ ಕರಾವಳಿಯ ಸುಪ್ರಸಿದ್ಧ ದೇಗುಲ ಕಾಪು ಮಾರಿಗುಡಿಗಿಂದು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ ಕೊಟ್ಟಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಭೇಟಿ ಕೊಟ್ಟ ಮಾರಿಯಮ್ಮನ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿ ದರ್ಶನದ ಬಳಿಕ ಅಶ್ವಿನಿ ಅವರಿಗೆ ದೇಗುಲದ ಪ್ರಧಾನ ಅರ್ಚಕರು ಪ್ರಸಾದ ನೀಡಿ ಗೌರವಿಸಿದ್ದಾರೆ.
ಕಾಪು ಮಾರಿಗುಡಿ ದೇವಸ್ಥಾನಕ್ಕೆ ಇತ್ತೀಚೆಗೆ ಶಿಲ್ಪಾ ಶೆಟ್ಟಿ, ರಕ್ಷಿತ್ ಶೆಟ್ಟಿ, ಕಂಗನಾ ರಣಾವತ್ ಸೇರಿದಂತೆ ಹಲವು ತಾರೆಯರು ಭೇಟಿ ಕೊಟ್ಟಿದ್ದನ್ನು ನಾವಿಲ್ಲಿ ಸ್ಮರಿಸಬಹುದು.