ಕೋಲಾರ : ಎರಡು ದಶಕಗಳ ಹೋರಾಟದ ಫಲವಾಗಿ ವಿಶ್ವೇಶ್ವರಯ್ಯ ಕ್ರೀಡಾಂಗಣ ಸಿಂಥೆಟಿಕ್ ಟ್ರ್ಯಾಕ್ ಆಗಿ ಅಭಿವೃದ್ಧಿಯಾಗಿದ್ದು, ಯುವ ಕ್ರೀಡಾಪಟುಗಳು ಕ್ರೀಡಾಂಗಣವನ್ನು ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಪ್ಯಾರಾ ಒಲಂಪಿಕ್ ಅಸೋಸಿಯೇಶನ್ ಜಿಲ್ಲಾದ್ಯಕ್ಷ ಕೆ. ಜಯದೇವ್ ಹೇಳಿದರು.
ಕೃಷ್ಣಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ಬೃಹತ್ ಪಾದಯಾತ್ರೆ
ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಅಥ್ಲೆಟಿಕ್ ಹಾಗೂ ಜುಡೋ ಕ್ರೀಡಾ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಪಟುಗಳ ಒತ್ತಾಸೆಯ ಹೋರಾಟದಿಂದಾಗಿ ಸುಸಜ್ಜಿತ ಕ್ರೀಡಾಂಗಣ ರೂಪುಗೊಂಡಿದ್ದು ಇದೇ ಕ್ರೀಡಾಂಗಣದಲ್ಲಿ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲು ಸಿದ್ದತೆ ನಡೆಸಿದೆ. ಎಲ್ಲಾ ಕ್ರೀಡಾಪಟುಗಳು ಸಹಕಾರ ನೀಡಬೇಕೆಂದು ಕೋರಿದರು.