ಒಟ್ಟಾವಾ:- ಭಾರತೀಯ ಪ್ರಜೆಯನ್ನು ಕೆನಡಾದಲ್ಲಿ ಕೊಲೆ ಮಾಡಲಾಗಿದ್ದು, ಶಂಕಿತ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಕೆನಡಾದ ರಾಕ್ಲ್ಯಾಂಡ್ ಪ್ರದೇಶದಲ್ಲಿ ಘಟನೆ ಜರುಗಿದ್ದು, ಈ ಬಗ್ಗೆ ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.
ಒಟ್ಟಾವಾ ಬಳಿಯ ರಾಕ್ಲ್ಯಾಂಡ್ನಲ್ಲಿ ಚಾಕುವಿನಿಂದ ಇರಿದು ಭಾರತೀಯನನ್ನು ಕೊಲೆ ಮಾಡಿರುವ ದುರಂತದ ಘಟನೆಗೆ ನಾವು ತೀವ್ರ ದುಃಖಿತರಾಗಿದ್ದೇವೆ. ಶಂಕಿತ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಸಮುದಾಯ ಸಂಘದ ಮೂಲಕ ಕೊಲೆಯಾದ ವ್ಯಕ್ತಿಯ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ನಾವು ನಿಕಟ ಸಂಪರ್ಕದಲ್ಲಿದ್ದೇವೆ’ ಎಂದು ಭಾರತೀಯ ರಾಯಭಾರಿ ಕಚೇರಿ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದೆ.