Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕದಂಬ ನೌಕಾ ನೆಲೆಯಲ್ಲಿ IOS ಸಾಗರ ಹೆಸರಿನ ಕಾರ್ಯಾಚರಣೆ ; ಏನಿದರ ವಿಶೇಷತೆ..?

    By AIN AuthorApril 6, 2025
    Share
    Facebook Twitter LinkedIn Pinterest Email
    Demo

    ಉತ್ತರ ಕನ್ನಡ : ರಕ್ಷಣಾ ಕ್ಷೇತ್ರದಲ್ಲಿ ಭಾರತ ಹಲವು ಮಹತ್ತರ ಕಾರ್ಯಗಳನ್ನು ಸಾಧಿಸುತ್ತಾ ಬಂದಿದೆ. ಇದೀಗ  ಹಿಂದೂ ಮಹಾಸಾಗರಕ್ಕೆ ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು, ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಗೆ ಮುಂದಾಗಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯನ್ನು ಏಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ಮಾಡುವ ಗುರಿಯನ್ನ ಹೊಂದಿರುವ ಭಾರತ ಸರ್ಕಾರ, ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಮಾಡತ್ತಲಿದೆ. ಇದರ ನಡುವೆಯೇ ಇನ್ನೊಂದು ಐತಿಹಾಸಿಕ ಕಾರ್ಯಕ್ಕೆ ಕಾರವಾರದ ನೌಕಾನೆಲೆ ಸಾಕ್ಷಿ ಆಗಿದೆ.

     

    ಹೌದು, ಕಾರವಾರದ ಕದಂಬ ನೌಕಾ ನೆಲೆಯಲ್ಲಿ ಐ.ಓ.ಎಸ್ ಸಾಗರ ಹೆಸರಿನ ಕಾರ್ಯಾಚರಣೆಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಚಾಲನೆ ನೀಡಿದ್ದಾರೆ. ಕೀನ್ಯಾ, ಮಡ್ಗಾಸ್ಕರ್‌, ಮಾಲ್ಡೀವ್ಸ್‌, ಮಾರಿಶಸ್‌, ಮೊಝಾಂಬಿಕ್‌, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಕೊಮೊರೋಸ್‌, ಸೇಂಚ್‌ಹೆಲ್ಸ್‌ ಹೀಗೆ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡಿರುವ ಭಾರತ, ತಮ್ಮ ದೇಶದ ರಕ್ಷಣೆಯ ಜೊತೆಗೆ ಬೇರೆ ದೇಶದ ರಕ್ಷಣೆಗೂ ಮುಂದಾಗಿದೆ.

    ಐಎನ್‌ಎಸ್‌ ಸುನೈನಾ ಎಂಬ ಹಡಗು ಹಿಂದೂ ಮಹಾಸಾಗರದಲ್ಲಿ ಕಾರ್ಯಾಚರಣೆ ಮಾಡಲಿರುವ ವಿಶೇಷ ಅಂಡರ್ ಪೆಟ್ರೋಲಿಂಗ್ ಯುದ್ದ ನೌಕೆ ಆಗಿದೆ. ಈ ನೌಕೆಯಲ್ಲಿ ಒಟ್ಟು 120 ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯ ನಿರ್ವಹಿಸಿತ್ತಿದ್ದು, ಆ ಪೈಕಿ 9 ದೇಶಗಳ 44 ಸಿಬ್ಬಂದಿಗಳು ಮತ್ತು ಭಾರತ ದೇಶದ 76 ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ.

     

    ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜನಾಥ್ ಸಿಂಗ್ ಒನ್‌ ಓಶನ್‌ ಒನ್‌ ಮಿಷನ್‌ ಎಂಬ ಉಪಕ್ರಮದಡಿ ಭಾರತ ಈ ಹೆಜ್ಜೆ ಇಟ್ಟಿದ್ದು, ಹಿಂದು ಮಹಾಸಾಗರ ವ್ಯಾಪ್ತಿಯ ಭಾರತ ಮಿತ್ರ ರಾಷ್ಟ್ರಗಳ ನಡುವೆ ಸಮುದ್ರ ವ್ಯವಹಾರದ ಬಾಂಧವ್ಯ ವೃದ್ಧಿ, ಪರಸ್ಪರ ಸಹಕಾರ ವೃದ್ಧಿ ಮಾಡಿಕೊಳ್ಳುವ ಜತೆಗೆ ಹಿಂದು ಮಹಾಸಾಗರದ ರಕ್ಷಣೆ ಅದರ ಸುತ್ತಲಿನ ಬಳಕೆದಾರ ರಾಷ್ಟ್ರಗಳಿಗೆ ಸೇರಿದ್ದು ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಲು ಭಾರತ ಹೊರಟಿದೆ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಮದ್ದೂರು ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಅಮಾನತಿಗೆ ಶಾಸಕ ಕೆ.ಎಂ.ಉದಯ್ ಸೂಚನೆ

    May 29, 2025

    ಪ್ರೀತಿಸಿ ಮದುವೆಯಾಗಿದ್ದವಳ ಕೊಂದು ಎಸ್ಕೇಪ್ ಆಗಿದ್ದ ಪತಿ ಅರೆಸ್ಟ್!

    May 29, 2025

    ಪ್ರಕೃತಿ ವಿಕೋಪ ಪ್ರದೇಶಗಳಿಗೆ ಡಾ. ಸಿದ್ದಲಿಂಗಯ್ಯ ಹಿರೇಮಠ ಭೇಟಿ: ಮಳೆ ಹಾನಿ ತಡೆಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ!

    May 29, 2025

    ಹೃದಯಾಘಾತದಿಂದ 21 ವರ್ಷದ ಯುವತಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

    May 29, 2025

    ರೈತರಿಗೆ ಸಿಹಿ ಸಮಾಚಾರ: ಕಿಸಾನ್ ಕ್ರೆಡಿಟ್‌ಕಾರ್ಡ್ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ!

    May 29, 2025

    ನನಗೆ ಓದಲು ಇಷ್ಟವಿಲ್ಲ: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಸೂಸೈಡ್!

    May 29, 2025

    Booker Prize winner: ಬೂಕರ್‌ ವಿಜೇತ ಕನ್ನಡತಿಯರಿಗೆ ತಾಯ್ನಾಡಿನಲ್ಲಿ ಭವ್ಯ ಸ್ವಾಗತ

    May 28, 2025

    ಕೋಲಾರ ಡಿಸಿಸಿ ಬ್ಯಾಂಕ್‌ ಚುನಾವಣೆ ಫಲಿತಾಂಶ ಪ್ರಕಟ: ಬ್ಯಾಲಹಳ್ಳಿ ಗೋವಿಂದೇಗೌಡಗೆ ಗೆಲುವು!

    May 28, 2025

    ಪಾರ್ಕಿಂಗ್ ವಿಚಾರಕ್ಕೆ ಕಿರಿಕ್: ಪಕ್ಕದ ಮನೆಯವನ ಮೂಗು ಕಚ್ಚಿದ ಭೂಪ!

    May 28, 2025

    ಕಮಲ್ ಹಸನ್ ವಿರುದ್ಧ ಹುಬ್ಬಳ್ಳಿಯಲ್ಲಿ ಅಪ್ಪು ಫ್ಯಾನ್ಸ್‌ ಪ್ರತಿಭಟನೆ

    May 28, 2025

    ಮತ್ತೆ ಮೊಳಗಲಿದೆ ವಾರ್‌ ಸೈರನ್‌..ನಾಳೆ 4 ರಾಜ್ಯದಲ್ಲಿ ಮಾಕ್‌ ಡ್ರೀಲ್!?

    May 28, 2025

    ಪೌರ ನೌಕರರ 2 ನೇ ದಿನದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ!

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.