ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ತಾಲೂಕು ವೀರಮಹೇಶ್ವರ ಜಂಗಮಾಭಿವೃದ್ಧಿ ಸಂಘದಿಂದ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನ ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿ ಹಿನ್ನೆಲೆಯಲ್ಲಿ ರೇಣುಕಾಚಾರ್ಯರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಮುಂಡರಗಿ ಸಂಸ್ಥಾನಮಠದ ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳು ಚಾಲನೆ ನೀಡಿದರು. ಹಲವು ವಾದ್ಯ ಮೇಳಗಳೊಂದಿಗೆ ನಡೆದ ಮೆರವಣಿಗೆ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅನ್ನದಾನೀಶ್ವರ ಮಠಕ್ಕೆ ಆಗಮಿಸಿತು. ನಂತರ ಧರ್ಮಸಭೆ ಜರುಗಿತು. ಸಭೆಯಲ್ಲಿ ಹಂಪಸಾಗರ, ವಿರುಪಾಪುರ, ಹಿರೇವಡ್ಡಟ್ಟಿ ಹಾಗೂ ಅಳವಂಡಿಯ ಪೂಜ್ಯರು ನೇತೃತ್ವ ವಹಿಸಿದ್ದರು.
ಮುಂಡರಗಿಯಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ
By Author AIN