ಸಿಂಗಾಪುರ:- ಸಿಂಗಾಪುರ ಶಾಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಭಾರೀ ಅನಾಹುತ ಸಂಭವಿಸಿರುವ ಘಟನೆ ಇಂದು ಜರುಗಿದೆ.
ಟಾಲಿವುಡ್ನ ಪವರ್ ಸ್ಟಾರ್ ನಟ ಪವನ್ ಕಲ್ಯಾಣ್ ಕಿರಿಯ ಮಗನೂ ಕೂಡ ಇದೇ ಶಾಲೆಯಲ್ಲಿ ಓದುತ್ತಿದ್ದರು. ಘಟನೆಯಿಂದ ನಟನ ಪುತ್ರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟನ ಪುತ್ರ ಮಾರ್ಕ್ ಶಂಕರ್ ಸಧ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅವಘಡದಲ್ಲಿ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಪವನ್ ಕಲ್ಯಾಣ್ ಪುತ್ರನನ್ನು ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪವನ್ ಕಲ್ಯಾಣ್ ಸದ್ಯ ಸಿಂಗಪೂರ್ಗೆ ತೆರಳಿದ್ದಾರೆ. ಮಗ ಓದುತ್ತಿದ್ದ ಶಾಲೆಯಲ್ಲಿ ಬಂಕಿ ಅವಘಡ ಆಗಿದೆ. ಮಗ ಮಾರ್ಕ್ ಶಂಕರ್ಗೆ ತೀವ್ರ ಸುಟ್ಟಗಾಯಗಳೂ ಆಗಿವೆ. ಅದಕ್ಕೇನೆ ಮಗನ ಆರೈಕೆ ಮಾಡಲು ಪವನ್ ಕಲ್ಯಾಣ್ ಸಿಂಗಪೂರ್ಗೆ ತೆರಳಿದ್ದಾರೆ ಅನ್ನುವ ಮಾಹಿತಿ ಹೊರ ಬಿದ್ದಿದೆ.