ಚಾಮರಾಜನಗರ : ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಯೋಗೇಂದ್ರ ಅವರ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ, ಖಾಲಿ ಸಿಲಿಂಡರ್, ಸೈಕಲ್ ಪ್ರದರ್ಶಿಸಿ ನಡುರಸ್ತೆಯಲ್ಲಿ ಸೌದೆ ಒಲೆ ಹೊತ್ತಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸೈಯದ್ ಮುಸಾಯಿಬ್, ಫರ್ದನ್, ಗೀತಾ ಸಿದ್ದರಾಜು, ಚಂದನ್, ಪ್ರಧಾನ ಕಾರ್ಯದರ್ಶಿ ನಂಜುಂಡಶೆಟ್ಟಿ, ವಿಶ್ವ, ಮುಖಂಡ ನಾಗೇಂದ್ರ ನಾಯಕ ಜಿಲ್ಲಾ ಕಾಂಗ್ರೆಸ್ ನ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಕ್ಷಯ್ ಕುಮಾರ್, ಉಸ್ಮಾನ್, ಸಚಿನ್, ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಮೋಹನ್ ನಗು, ಶಶಾಂಕ್, ಮುತ್ತು, ರಾಜ್ಯ ಕಾರ್ಯದರ್ಶಿ ಸ್ವಾಮಿ, ಆನಂತ್, ಸೈಯದ್ ತೋಸಿಫ್, ಲೋಹಿತ್, ವಿಜಯ್, ಅಜಯ್, ವಿಶ್ವ, ಶಿವರಾಜ್, ಪೃಥ್ವಿ, ವಿಶ್ವಾಸ್, ಮಾದೇಶ್ , ನವೀನ್ ಇತರರು ಭಾಗವಹಿಸಿದ್ದರು.