ಯಾದಗಿರಿ: ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ ಯಾದಗಿರಿಯ ಮಾಧ್ವಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಅಧ್ಯಕ್ಷರ ಬದಲಾವಣೆ ಬಗ್ಗೆ ಪಬ್ಲಿಕ್ ನಲ್ಲಿ ಮಾತಾಡೋದಿಲ್ಲಎಂದಿದ್ದಾರೆ. ಬಹಳ ಸ್ಪಷ್ಟವಾಗಿ ಆ ರೀತಿ ಮಾತಾಡಬಾರದು ಅಂತ ಹೈಕಮಾಂಡ್ ಹೇಳಿದೆ ಯಾರ್ಯಾರು ಮಾತಾಡ್ತಾರೆ ಅವರ ಬಗ್ಗೆ ನಾನು ಕಮೆಂಟ್ ಮಾಡಲ್ಲ. ನಾನು ಯಾವತ್ತೂ ಮಾತಾಡೋದಿಲ್ಲ ಖರ್ಗೆಯವರು ಬಂದಾಗ ನೀವು ಎಐಸಿಸಿ ಅಧ್ಯಕ್ಷರು ನೀವೇ ಜವಾಬ್ದಾರರು ಅಂತ ಕೇಳಿ ಎಂದರು.
ಕಾಂಗ್ರೆಸ್ ಸರ್ಕಾರದಲ್ಲೂ ಭ್ರಷ್ಟಾಚಾರ ನಡಿತಿದೆ: ಒಪ್ಪಿಕೊಂಡ ಬಸವರಾಜ ರಾಯರೆಡ್ಡಿ
ಕರ್ನಾಟಕ ನಂಬರ್ ಒನ್ ಭ್ರಷ್ಟ ರಾಜ್ಯ ಎಂಬ ಶಾಸಕ ರಾಯರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿ, ಹಿಂದೆ ಬಿಜೆಪಿ ಸರ್ಕಾರದಲ್ಲಿ ಇದ್ದ ಪರಿಸ್ಥಿತಿ ಅವರು ಹೇಳಿದ್ದಾರೆ. ನಮ್ಮ ಅವಧಿಯಲ್ಲಿ ಸುಧಾರಣೆ ಆಗುತ್ತಿದೆ. ಭ್ರಷ್ಟಾಚಾರ ಕಡಿಮೆ ಆಗುತ್ತಿದೆ., ಇನ್ನು 3 ವರ್ಷದಲ್ಲಿ ಸಂಪೂರ್ಣ ಕಡಿಮೆ ಆಗುತ್ತೆ. ಬಿಜೆಪಿ ಇದ್ದಾಗ ನೂರಕ್ಕೆ ನೂರು ಭಾಗ ಭ್ರಷ್ಟಾಚಾರ ದೇಶದಲ್ಲಿ ಜಾಸ್ತಿ ಇತ್ತು ಅಂತ ಹೇಳಿದ್ದಾರೆ. ಆದರೆ ನಮ್ಮ ಅವಧಿಯಲ್ಲಿ ನಡೆದಿರುವದಲ್ಲ ಎಂದರು.
ಇನ್ನೂ ಸರ್ಕಾರದ ಜೆಡಿಎಸ್ ಫೋಸ್ಟರ್ ಅಭಿಯಾನ ವಿಚಾರವಾಗಿ ಮಾತನಾಡಿ, ಜೆಡಿಎಸ್ ನವರು ಏನೇ ಮಾಡಿದ್ರು ಜನ ಅವರಿಗೆ ತಿರಸ್ಕಾರ ಮಾಡಿದ್ದಾರೆ. ಯಾಕೆಂದ್ರೆ ಅವರ ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರ, ಹಗರಣಗಳ ಮೇಲೆ ಹಗರಣಗಳು ನಡೆದಿವೆ. ಬೆಲೆ ಏರಿಕೆ ಮಾಡಿದರು, ಇದರಿಂದ ಅವರನ್ನ ಜನ ತಿರಸ್ಕಾರ ಮಾಡಿದ್ರ. ಅದಕ್ಕೆ ನಮಗೆ 136 ಸ್ಥಾನವನ್ನ ಗೆಲ್ಲಿಸಿದ್ದಾರೆ ಎಂದರು.