ಬೆಂಗಳೂರು:- ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಸಿಡಿದೆದ್ದಿದೆ. ಜೇಷ್ಠತೆ ಆದರದ ಮೇಲೆ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ಗುತ್ತಿಗೆದಾರರು, ಸರ್ಕಾರಕ್ಕೆ ಪತ್ರ ಬರೆದು ಹಲವು ಆರೋಪಗಳನ್ನು ಮಾಡಿದ್ದಾರೆ.
ಉಗ್ರ ರಾಣಾನನ್ನು ಭಾರತಕ್ಕೆ ಎಳೆದು ತಂದ ಎನ್ ಐಎ: ದೆಹಲಯಲ್ಲಿ ಫುಲ್ ಹೈಅಲರ್ಟ್
ಹಣ ಬಿಡುಗಡೆಗೆ ಕಾಣದ ಕೈಗಳು, ಮಧ್ಯವರ್ತಿಗಳ ಕಾಟ ಹೆಚ್ಚಾಗಿದೆ ಎಂದು ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಬಾಂಬ್ ಸಿಡಿಸಿದೆ.
ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಧ್ಯವರ್ತಿಗಳ ಕಾಟ ಕೊಡುತ್ತಿದ್ದಾರೆ. ಜೇಷ್ಠತೆ ಪಾಲಿಸದೇ ಸ್ಪೆಷಲ್ ಎಲ್ಓಸಿ ಸೃಷ್ಟಿ ಮಾಡಿ ಹಣ ಬಿಡುಗಡೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಂಘ ಲೋಕೋಪಯೋಗಿ ಇಲಾಖೆ, ನಾಲ್ಕು ನೀರಾವರಿ ನಿಗಮ ಮತ್ತು ಸಣ್ಣ ನೀರಾವರಿ ಇಲಾಖೆಯಲ್ಲಿ ಕಾಣದ ಕೈಗಳ ಬಗ್ಗೆ ಚರ್ಚೆ ಮಾಡಿ ಸಣ್ಣ ಗುತ್ತಿಗೆದಾರರಿಗೆ ನ್ಯಾಯ ಒದಗಿಸುವಂತೆ ಪತ್ರ ಬರೆದಿದೆ