ಬೆಂಗಳೂರು:-ಗುತ್ತಿಗೆದಾರರ ಸಂಘದಿಂದ ಸಚಿವ ಸತೀಶ್ ಜಾರಕಿಹೊಳಿ, ಬೋಸರಾಜು ಮೇಲೆ ಆರೋಪ ಮಾಡಿರುವ ವಿಚಾರವಾಗಿ ಸಚಿವ ಕೃಷ್ಣ ಬೈರೇಗೌಡ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಇಂದು RCB Vs DC ಹೈವೋಲ್ಟೇಜ್ ಮ್ಯಾಚ್: ತವರಲ್ಲಿ ಆರ್ಭಟಿಸುತ್ತಾ ಬೆಂಗಳೂರು?
ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮೇಲೆ ಗುತ್ತಿಗೆದಾರರು ಮಾಡಿರುವ ಕಮಿಷನ್ ಆರೋಪಕ್ಕೆ ಸೂಕ್ತ ದಾಖಲಾತಿ ಕೊಟ್ಟರೆ ತನಿಖೆ ಮಾಡಿಸುವುದಾಗಿ ಹೇಳಿದ್ದಾರೆ.
ಗುತ್ತಿಗೆದಾರರು ಏನಾದರೂ ಆರೋಪ ಮಾಡಿದರೆ, ಅದಕ್ಕೆ ಸೂಕ್ತ ದಾಖಲಾತಿ ಕೊಟ್ಟರೆ ತನಿಖೆ ಮಾಡಿಸುತ್ತೇವೆ. ಗುತ್ತಿಗೆದಾರರ ದೂರು ಪರಿಶೀಲನೆ ಮಾಡುತ್ತೇವೆ. ಮಧ್ಯವರ್ತಿಗಳು ಯಾರು ಎಂದು ಅವರು ಮಾಹಿತಿ ಕೊಡಲಿ. ಯಾರ ಕುಟುಂಬದ ಹಸ್ತಕ್ಷೇಪ ಎಂದು ದಾಖಲಾತಿ ಕೊಡಲಿ. ಅವರು ಕೊಟ್ಟರೆ ದೂರು ಪರಿಶೀಲನೆ ಮಾಡುತ್ತೇವೆ. ಸಚಿವರು ಯಾರು? ಕುಟುಂಬದವರು ಯಾರು? ಎಂದು ನಿರ್ದಿಷ್ಟವಾಗಿ ಹೇಳಿದರೆ ತನಿಖೆ ಮಾಡಿಸುತ್ತೇವೆ ಎಂದು ತಿಳಿಸಿದರು.
ಯಾರ ಹಸ್ತಕ್ಷೇಪ ಎಂದು ಹೇಳಿದರೆ ತನಿಖೆ ಮಾಡಿಸಬಹುದು. ಬಿಜೆಪಿ ಮೇಲೆ 40% ಕಮಿಷನ್ ಆರೋಪದ ನ್ಯಾಯಾಂಗ ತನಿಖೆ ಆಗುತ್ತಿದೆ. ಕೋವಿಡ್ನಲ್ಲಿ ಅಕ್ರಮ ಆಗಿರುವ ಬಗ್ಗೆ ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಇದರ ತನಿಖೆಯೂ ನಡೆಯುತ್ತಿದೆ. ಅದೇ ರೀತಿ ಗುತ್ತಿಗೆದಾರರು ಏನಾದರೂ ಈ ಬಗ್ಗೆ ದೂರು ಕೊಟ್ಟರೆ ತನಿಖೆ ಮಾಡುತ್ತೇವೆ ಎಂದು ಹೇಳಿದರು