ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ IPL ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ Vs ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಿದ್ದವು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಿಡುವಿನ ಸಮಯದಲ್ಲಿ ಮ್ಯಾಚ್ ವೀಕ್ಷಣೆ ಮಾಡಿದ್ದಾರೆ.
ಹೆಂಡ್ತಿ ಸಾವಿನಿಂದ ಖಿನ್ನತೆ: I Love You ಹೇಮಾ ಎಂದು ಬರೆದು ತನ್ನಿಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಸೂಸೈಡ್!
ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಬೈರತಿ ಸುರೇಶ್ ಜೊತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯವನ್ನು ಸಿಎಂ ವೀಕ್ಷಸಿ ಎಂಜಾಯ್ ಮಾಡಿದರು.
ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 7 ವಿಕೆಟ್ಗಳ ನಷ್ಟಕ್ಕೆ 163 ರನ್ ಗಳಿಸಿತು. ತಂಡದ ಪರ ಟಿಮ್ ಡೇವಿಡ್ ಅಜೇಯ 37 ರನ್ ಗಳಿಸಿದರೆ, ಫಿಲ್ ಸಾಲ್ಟ್ 37 ರನ್, ರಜತ್ ಪತಿದಾರ್ 25 ಮತ್ತು ಕೊಹ್ಲಿ 22 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ವಿಪ್ರಾಜ್ ನಿಗಮ್ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಪಡೆದರು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 17.5 ಓವರ್ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಡೆಲ್ಲಿ ಪರ ಕೆಎಲ್ ರಾಹುಲ್ ಅಜೇಯ 93 ರನ್ ಗಳಿಸಿದರೆ, ಟ್ರಿಸ್ಟಾನ್ ಸ್ಟಬ್ಸ್ ಅಜೇಯ 38 ರನ್ ಗಳಿಸಿದರು.