ಚೆನ್ನೈ:- ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಿನಾಥುಕಡವು ಬಳಿಯ ಖಾಸಗಿ ಶಾಲೆಯಲ್ಲಿ ಪಿರಿಯಡ್ಸ್ ಆಗಿದ್ದಕ್ಕೆ 8ನೇ ತರಗತಿಯ ದಲಿತ ವಿದ್ಯಾರ್ಥಿನಿಯನ್ನು ಕ್ಲಾಸ್ ರೂಂ ಹೊರಗೆ ಪರೀಕ್ಷೆಗೆ ಕೂರಿಸಿರುವ ಅಮಾನವೀಯ ಘಟನೆ ಜರುಗಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುರುವಾರ RCB Vs DC ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ!
ಇಲ್ಲಿನ ಸೆಂಗುಟ್ಟೈಪಾಳ್ಯಂ ಗ್ರಾಮದಲ್ಲಿರುವ ಸ್ವಾಮಿ ಚಿದ್ಭವಂದ ಮೆಟ್ರಿಕ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿನಿ 8ನೇ ತರಗತಿ ಓದುತ್ತಿದ್ದಳು. ಏ.5 ರಂದು ವಿದ್ಯಾರ್ಥಿನಿಗೆ ಪಿರಿಯಡ್ಸ್ ಆಗಿತ್ತು. ಹೀಗಾಗಿ ಪಿರಿಯಡ್ಸ್ ನಂತರ, ಶಾಲಾ ಆಡಳಿತ ಮಂಡಳಿಯು ಏ.7 ರಂದು ವಿಜ್ಞಾನ ಪರೀಕ್ಷೆ ಮತ್ತು ಏ.9 ರಂದು ಬುಧವಾರ ಸಮಾಜ ವಿಜ್ಞಾನ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು.
ಏ.7 ರಂದು ವಿಜ್ಞಾನ ಪರೀಕ್ಷೆಯಲ್ಲಿ ತರಗತಿಯ ಹೊರಗೆ ಕೂರಿಸಿರುವುದಾಗಿ ವಿದ್ಯಾರ್ಥಿನಿ ತನ್ನ ತಾಯಿಗೆ ತಿಳಿಸಿದ್ದಳು. ಮುಂದಿನ ಪರೀಕ್ಷೆಗೆ ವಿದ್ಯಾರ್ಥಿನಿಯ ತಾಯಿ ಶಾಲೆಗೆ ತೆರಳಿದ್ದು, ತರಗತಿಯ ಹೊರಗೆ ಕೂರಿಸಿರುವುದನ್ನು ಗಮನಿಸಿದರು. ಬಳಿಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಶಾಲಾ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.