ದಾವಣಗೆರೆ: ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ಪತಿಯು ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾವಣೆಗೆರೆಯ ಎಸ್ಪಿ ನಗರದಲ್ಲಿ ಈ ದುರಂತ ಸಂಭವಿಸಿದೆ.
35 ವರ್ಷದ ಉದಯ್ ಎಂಬಾ ತನ್ನ 4 ವರ್ಷದ ಮಗಳಾದ ಸಿಂಧು ಶ್ರೀ, 3 ವರ್ಷದ ಶ್ರೀಜಯ್ ಮಕ್ಕಳನ್ನು ಕತ್ತು ಹಿಸುಕಿಕೊಂದು ನಂತರ ತಾನು ನೇಣಿಗೆ ಶರಣಾಗಿದ್ದಾನೆ.
ಅನಾರೋಗ್ಯದಿಂದಾಗಿ ಕಳೆದ 3 ತಿಂಗಳ ಹಿಂದೆ ಉದಯ್ ಪತ್ನಿ ಸಾವನ್ನಪ್ಪಿದ್ದರು. ಪತ್ನಿಯ ಸಾವಿನ ಬಳಿಕ ಉದಯ್ ಸಂಪೂರ್ಣ ಖಿನ್ನತೆಗೆ ಒಳಗಾಗಿದ್ದರು. ಇದರಿಂದಾಗಿ ಉದಯ್ ಈ ದುಡುಕು ನಿರ್ಧಾರಕ್ಕೆ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.