ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಗ್ರಾಮದಲ್ಲಿ KIADB ಭೂಸ್ವಾಧೀನ ನಡೆಸುವುದನ್ನು ವಿರೋಧಿಸಿ ರೈತರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ.
ನಿನ್ನೆ ಸಚಿವ ಕೆ.ಎಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಬಸ್ ನಲ್ಲಿ ಹೊರಟ್ಟಿದ್ದ ರೈತರನ್ನು ಪೊಲೀಸರು ಮಾರ್ಗಮಧ್ಯೆ ತಡೆದಿದ್ದರು. ಈ ವೇಳೆ ರೈತರ ಮತ್ತು ಪೋಲಿಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.
ಇಷ್ಟಾದರೂ ಸಹ, ಸಚಿವ ಕೆ.ಹೆಚ್ ಮುನಿಯಪ್ಪ, ರೈತರ ಮನವಿ ಸ್ವೀಕರಿಸಲು ಬಂದಿಲ್ಲ. ನಮ್ಮ ಸ್ವೀಕರಿಸಿ ಭೂಸ್ವಾಧೀನ ವಾಪಸ್ ಪಡೆಯೋವರೆಗೂ ಹೋರಾಟ ನಿಲ್ಲಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ನಿನ್ನೆಯಿಂದ ಇಡೀ ರಾತ್ರಿ ನಡುರಸ್ತೆಯಲ್ಲೇ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ.
ಚನ್ನರಾಯಪಟ್ಟಣ ಗ್ರಾಮದ 1777 ಎಕರೆ ಕೃಷಿ ಭೂಮಿಯನ್ನು ಭೂಸ್ವಾಧೀನದಿಂದ ಕೈ ಬಿಡಬೇಕೆಂದು ಕಳೆದ 1113 ದಿನದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಗೆ ಸರ್ಕಾರ ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದರು.