ಬೆಂಗಳೂರು: ರೇಣುಕಾಸ್ವಾಮಿ ಕೇಸ್ನಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಅವರು ಡೆವಿಲ್ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ವಿವಿಧ ಜಾಗಗಳಲ್ಲಿ ಡೆವಿಲ್ ಸಿನಿಮಾ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈ ಮಧ್ಯೆ ಮೆಜೆಸ್ಟಿಕ್ನಲ್ಲಿರುವ ಅಣ್ಣಮ್ಮ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಭೇಟಿ ನೀಡಿ, ದೇವಿಗೆ ಹರಕೆ ತೀರಿಸಿದ್ದಾರೆ.
ದರ್ಶನ್ ಜೈಲಿನಲ್ಲಿದ್ದಾಗ ವಿಜಯಲಕ್ಷ್ಮಿ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಇದೀಗ ಅಣ್ಣಮ್ಮ ದೇವಿಗೆ ದರ್ಶನ್ ಪತ್ನಿ ಹರಕೆ ಸಲ್ಲಿಸಿದ್ದಾರೆ. ಅಣ್ಣಮ್ಮ ದೇವಿಗೆ ಸೀರೆ ಜೊತೆ ಮಡಿಲಕ್ಕಿ ತುಂಬಿ ಹರಕೆ ತೀರಿಸಿದ್ದಾರೆ.
ಇನ್ನೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣ ಸ್ನೇಹಿತ ಧನ್ವೀರ್ ಅಭಿನಯದ ವಾಮನ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಗೆಳೆಯನ ಸಿನಿಮಾ ದರ್ಶನ್ ಸಾಥ್ ನೀಡಿದ್ದು, ಪ್ರೀಮಿಯರ್ ಶೋನಲ್ಲಿ ಭಾಗಿಯಾಗಿದ್ರು. ಆದ್ರೆ ಕೋರ್ಟ್ಗೆ ಹಾಜರಾಗದ ದರ್ಶನ್ ಸಿನಿಮಾ ನೋಡಲು ಬಂದಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.