ಕೋಲ್ಕತಾ:- ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ಮಸೂದೆ ವಿರೋಧಿಸಿ ಇಲ್ಲಿ ಮುಸ್ಲಿ ಮುಖಂಡರಿಂದ ಪ್ರತಿಭಟನೆ ಜರುಗಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನಿಮ್ತಿತಾ ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆ ಎರಡು ರೈಲನ್ನು ಜಖಂಗೊಳಿಸಿದ್ದಾರೆ.
ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿತ್ತು. ಸಂಜೆ ಬಳಿಕ ನಡೆದ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕನಿಷ್ಠ ಎರಡು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ.
ಅಲ್ಪಸಂಖ್ಯಾತರ ಪ್ರಾಬಲ್ಯ ಇರುವ ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ಮತ್ತು ಸುಟಿಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ನಿಮ್ತಿತಾ ರೈಲು ನಿಲ್ದಾಣದಲ್ಲಿ, ಪ್ರತಿಭಟನಾಕಾರರು ಗಂಟೆಗಟ್ಟಲೆ ರೈಲ್ವೆ ಹಳಿಗಳನ್ನು ತಡೆದು ರೈಲ್ವೇ ಆಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರೈಲ್ವೆ ಪೊಲೀಸ್ ಪಡೆ ಸಿಬ್ಬಂದಿ ಲಾಠಿ ಪ್ರಹಾರ ನಡೆಸಬೇಕಾಯಿತು.