ಕಲಬುರಗಿ:- ಕಲಬುರಗಿಯಲ್ಲಿ ನಿನ್ನೆ ತಾನೇ ಬಾಮೈದನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಬಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೌದು, ಹೆಂಡತಿಯನ್ನು ಮನೆಗೆ ಬಾ ಎಂದು ಕರೆದಿದ್ದಕ್ಕೆ ಬಾಮೈದನಿಂದ ಚಾಕು ಇರಿತಕ್ಕೊಳಗಾಗಿದ್ದ ಪತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
IPL 2025: ಬೆಂಗಳೂರು-ಡೆಲ್ಲಿ ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಬಲೆಗೆ ಬಿದ್ದ ಆರೋಪಿಗಳು!
ಆನಂದ್ ಕೊಲೆಯಾದ ವ್ಯಕ್ತಿ. ಆತ ಕಳೆದ ಎರಡು ವರ್ಷದ ಹಿಂದೆ ಗಾಜಿಪುರದ ಸ್ನೇಹಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆಯಾದ ಬಳಿಕ ಗಂಡ ಹೆಂಡತಿಯ ಮಧ್ಯೆ ಜಗಳವಾಗಿ ಪತ್ನಿ ತವರು ಮನೆ ಸೇರಿದ್ದಳು. ಆನಂದ್ ತನ್ನ ಅಣ್ಣನ ಮದುವೆ ಹಿನ್ನಲೆಯಲ್ಲಿ ಮನೆಗೆ ಬರುವಂತೆ ಸ್ನೇಹಾಳನ್ನು ಕರೆದಿದ್ದ.
ಇದೇ ವಿಚಾರಕ್ಕೆ ಸ್ನೇಹಾಳ ಸಹೋದರ ಟೋನಿ ಮತ್ತು ಆತನ ಸ್ನೇಹಿತರು ಸೇರಿ ಆನಂದ್ಗೆ ಚಾಕುವಿನಿಂದ ಇರಿದಿದ್ದರು. ಬಳಿಕ ಆತನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಟ್ರಾಮ್ ಕೇರ್ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.