ಬೆಂಗಳೂರು ಗ್ರಾಮಾಂತರ : ಏಕಾಏಕಿ ಎಲೆಕ್ಟ್ರಿಕ್ ಬೈಕ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ವಾಸವಿ ಕಲ್ಯಾಣ ಮಂಟಪದ ಸಮೀಪ ನಡೆದಿದೆ. ಅಂಗಡಿ ಮುಂಭಾಗ ಬೈಕ್ ನಿಲ್ಲಿಸಿದ್ದಾಗ ಅವಘಡ ಸಂಭವಿಸಿದೆ.
ದೊಡ್ಡಬಳ್ಳಾಪುರದ ಚಂದ್ರಶೇಖರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ವಾಹನ ಹೊತ್ತುರಿದಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಜಪಾನ್ ಮೂಲದ ಎಲೆಕ್ಟ್ರಿಕ್ ಬೈಕ್ ಖರೀದಿಸಿದ್ದರು. ಇತ್ತೀಚೆಗಷ್ಟೇ ನೂತನ ಬ್ಯಾಟರಿಯನ್ನು ಚಂದ್ರಶೇಖರ್ ಹಾಕಿಸಿದ್ದರು. ಅಂಗಡಿ ಮುಂದೆ ತಂದು ನಿಲ್ಲಿಸಿದ ನಂತರ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ.
ರಾಜಮನೆತನದ ಆಸ್ತಿ ವಿಚಾರವಾಗಿ ರಾಜಮಾತೆ ಪ್ರಮೋದಾ ದೇವಿ ಪತ್ರ ; ಸಿದ್ದನಪುರ ಗ್ರಾಮಸ್ಥರಲ್ಲಿ ಆತಂಕ
ಮುಖ್ಯ ರಸ್ತೆಯಲ್ಲಿ ದಟ್ಟವಾಗಿ ಆವರಿಸಿದ್ದರಿಂದ ಸ್ಥಳೀಯರು ಆತಂಕ ಕೀಡಾಗಿದ್ದರು . ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.