ಮೈಸೂರು: ಮಹಿಳಾ ದಿನಾಚರಣೆ ಕಾರ್ಯಕ್ರಮದ ವೇದಿಕೆ ಮೇಲೆಯೇ ಮಹಿಳಾ ಆಯೋಗದ ಅಧ್ಯಕ್ಷರಿಗೆ ಯುವತಿಯು ಪ್ರಶ್ನೆ ಮಾಡಿದ್ದು ಇದೀಗ ಭಾರಿ ವೈರಲ್ ಆಗುತ್ತಿದೆ. ವೇದಿಕೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ರಾಜ್ಯದಲ್ಲಿ ಇತ್ಯರ್ಥವಾಗಿರುವ ಅತ್ಯಾಚಾರ ಪ್ರಕರಣಗಳ ಲಿಸ್ಟ್ ಕೊಡಿ ಎಂದು ಕೇಳಿದಾಗ, ಮಹಿಳಾ ಆಯೋಗದ ಅಧ್ಯಕ್ಷರು ಒಂದು ಕ್ಷಣ ತಬ್ಬಿಬ್ಬಾಗಿದ್ದಾರೆ.
ಮೈಸೂರಿನ ಮಹಾರಾಣಿ ಕಲಾ ಕಾಲೇಜಿನಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಇಂತದೊಂದು ಘಟನೆ ನಡೆದಿದೆ. ಕಾರ್ಯಕ್ರಮ ನಡೀತಿದ್ದ ಸಮಯದಲ್ಲೇ ಸ್ವಾತಿ ಎಂಬ ವಿದ್ಯಾರ್ಥಿನಿ ಏಕಾಏಕಿ ವೇದಿಕೆ ಹತ್ತಿ, ಮಹಿಳಾ ಆಯೋಗದ ಅಧ್ಯಕ್ಷೆಗೆ ಪ್ರಶ್ನೆ ಮಾಡಿದ್ದಾರೆ.
ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಪ್ರಕರಣ ಎಷ್ಟು, ಎಷ್ಟು ಪ್ರಕರಣ ಇತ್ಯಾರ್ಥ ಆಗಿದೆ? ನಿಮ್ಮ ಸರ್ಕಾರದಿಂದ ಮಾಹಿತಿ ಕೊಡಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ನ್ಯಾಯಾಲಯದ ಆದೇಶ ನಾವು ಪ್ರಶ್ನಿಸಲು ಸಾಧ್ಯವಿಲ್ಲ, ಎಲ್ಲದಕ್ಕೂ ಸಾಕ್ಷಿ ಮುಖ್ಯ ಎಂದು ಕಾನೂನು ಹೇಳುತ್ತದೆ. ಯಾವುದೇ ಪ್ರಕರಣವಾದರೂ ಸಾಕ್ಷಿಗಳು ಮುಖ್ಯವಾಗುತ್ತೆ. ಲ್ಯಾಬ್ ಪರೀಕ್ಷೆಗೆ ಕಳುಹಿಸಿದ್ರೆ, 5 ತಿಂಗಳು ಬೇಕು ರಿಪೋರ್ಟ್ ಬರುವುದಕ್ಕೆ. ಇಲ್ಲಿ ನಮಗೆ ಹಿನ್ನಡೆಯಾಗುತ್ತಿದೆ ಎಂದು ಉತ್ತರಿಸಿ ನಾಗಲಕ್ಷ್ಮಿ ಔಧರಿ ಸುಮ್ಮನಾಗಿದ್ದಾರೆ.