ಬೆಂಗಳೂರು:- ಬ್ಯಾಂಕ್ ಜನಾರ್ಧನ್ ವಿಧಿನಶರಾಗಿದ್ದು, ಗೆಳೆಯನ ನಿಧನಕ್ಕೆ ಜಗ್ಗೇಶ್ ಭಾವುಕರಾಗಿದ್ದಾರೆ. ಬ್ಯಾಂಕ್ ಜನಾರ್ಧನ್ ಸಾವಿನ ಸುದ್ದಿ ಕೇಳುತ್ತಿದ್ದಂತೆ ಕನ್ನಡ ಚಿತ್ರರಂಗವೇ ಶಾಕ್ಗೆ ಒಳಗಾಗಿದೆ. ಅದರಲ್ಲೂ ಬ್ಯಾಂಕ್ ಜನಾರ್ಧನ್ ನಿಧನದ ವಿಚಾರ ತಿಳಿಯುತ್ತಿದ್ದಂತೆ ನವರಸ ನಾಯಕ ಜಗ್ಗೇಶ್ ಅವರು ಟ್ವೀಟ್ ಮಾಡುವ ಮೂಲಕ ಕಂಬನಿ ಮಿಡಿದಿದ್ದಾರೆ.
ಕರ್ನಾಟಕದ ಹಲವೆಡೆ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
ಆತ್ಮೀಯ ಗೆಳೆಯ ಜನಾರ್ಧನ್ ಹೋಗಿ ಬಾ. ನಾವಿಬ್ಬರು ಪಾತ್ರಕ್ಕಾಗಿ ಹಸಿದು ಅಲೆದು ಪಡೆದು ಗೆದ್ದವರು. ನಾನು ನಿನ್ನ ಚಿತ್ರದಲ್ಲಿ ಕರೆಯುತ್ತಿದ್ದ ಬಾಂಡ್ಲಿ ಫಾದರ್ ಪದ ನಿನ್ನ ಓಡನಾಟ ನೆನೆದು ಭಾವುಕನಾದೆ. ಆತ್ಮಕ್ಕೆ ಶಾಂತಿ ಅಂತ ಬರೆದುಕೊಂಡಿದ್ದಾರೆ.
ಚಿತ್ರರಂಗಕ್ಕೆ ಪಾದಾರ್ಪನೆ ಮಾಡಿದ ಸಂದರ್ಭದಲ್ಲಿ ನಟ ಜಗ್ಗೇಶ್ ಜತೆ ಬ್ಯಾಂಕ್ ಜನಾರ್ಧನ್ ಹೆಚ್ಚು ಕಾಲ ಕಳೆದಿದ್ದರು. ಜಗ್ಗೇಶ್ ಬಹುತೇಕ ಚಿತ್ರಗಳಲ್ಲಿ ನಟಿಸಿರುವ ಬ್ಯಾಂಕ್ ಜನಾರ್ಧನ್ ನಟಿಸಿದ್ದಾರೆ. ಜಗ್ಗೇಶ್ಗೆ ತಂದೆಯಾಗಿ ನಟಿಸಿದ ಸಿನಿಮಾಗಳು ಬ್ಲಾಕ್ ಬಸ್ಟರ್ ಆಗಿದ್ದವು. ಸೂಪರ್ನನ್ ಮಗ, ತರ್ಲೆ ನನ್ ಮಗ ಚಿತ್ರದಲ್ಲಿ ತಂದೆಯಾಗಿ ನಟಸಿದ್ದರು.